Webdunia - Bharat's app for daily news and videos

Install App

ವಿದ್ಯುತ್‌ ತಂತಿ ತಗಲಿ ಬಾಲಕ ಸಾವು

Webdunia
ಬುಧವಾರ, 18 ಜನವರಿ 2023 (20:22 IST)
ಗಾಳಿಪಟ ಹಾರಿಸಲು ಹೋಗಿ ಆಕಸ್ಮಿಕವಾಗಿ ಕೆಪಿಟಿಸಿಎಲ್‌ ನ 66 ಕೆವಿ ವಿದ್ಯುತ್‌ ತಂತಿ ತಗಲಿ ಬಾಲಕ ಮೃತಪಟ್ಟ ಘಟನೆ ಆರ್‌ .ಟಿ. ನಗರದ ವಿಶ್ವೇಶ್ವರಯ್ಯ ಉದ್ಯಾನವನ ಬಳಿ ಸಂಭವಿಸಿದೆ. 
ಅಬೂಬಕರ್‌ (11) ಎಂಬ ಬಾಲಕ ಮೃತಪಟ್ಟಿದ್ದು, ಈತ ಜನವರಿ 16 ರಂದು ಮದ್ಯಾಹ್ನ 3 ಗಂಟೆಗೆ ಗಾಳಿಪಟ ಹಾರಿಸುತ್ತಿದ್ದಾಗ ಕೆಪಿಟಿಸಿಎಲ್‌ ನ 66 ಕೆವಿ ಹೈಟೆನ್ಸನ್‌ ವಿದ್ಯುತ್‌ ತಂತಿ ತಗಲಿ ತೀವೃ ಗಾಯಗೊಂಡಿದ್ದ. ತಕ್ಷನ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತ ಪಟ್ಟಿದ್ದ. ಗಾಳಿಪಟ ವಿದ್ಯುತ್‌ ತಂತಿಗೆ ಸಿಕ್ಕಹಾಕಿಕೊಂಡಾಗ ಬಾಲಕ ಅದನ್ನು ಬಿಡಿಸಲು ಪಕ್ಕದ ಕಟ್ಟಡ ಏರಿದ್ದ. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಕೆಪಿಟಿಸಿಎಲ್‌ ನ 66 ಕೆವಿ ವಿದ್ಯುತ್‌ ತಂತಿ ತಗಲಿ ಗಾಯಗೊಂಡಿದ್ದ. ಸ್ಥಳಕ್ಕೆ ಕೆಪಿಟಿಸಿಎಲ್‌ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಘಟನೆ ಬೆಸ್ಕಾಂ ನಿರ್ಲಕ್ಷ್ಯದಿಂದ ಸಂಭವಿಸಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments