Select Your Language

Notifications

webdunia
webdunia
webdunia
webdunia

ಅನೈತಿಕ ಸಂಬಂಧ ಬಾಲಕನ ಹತ್ಯೆ

ಅನೈತಿಕ ಸಂಬಂಧ ಬಾಲಕನ ಹತ್ಯೆ
ಬೆಂಗಳೂರು , ಬುಧವಾರ, 28 ಸೆಪ್ಟಂಬರ್ 2022 (15:50 IST)

ನಿಪ್ಪಾಣಿ ತಾಲ್ಲೂಕಿನ ನಾಯಿಂಗ್ಲಜ ಗ್ರಾಮದ ವಾಶಪ್ಪ ಎನ್ನುವವರು ತಮ್ಮ 12 ವರ್ಷದ ಒಬ್ಬನೇ ಪುತ್ರನನ್ನು ತಂಗಿಯ ಮನೆಯಲ್ಲಿ ಓದಲು ಬಿಟ್ಟಿದ್ದರು. ವಾಶಪ್ಪನ ಸಹೋದರಿಯ ಊರಾದ ಹೊಸೂರಿನಲ್ಲಿ ಬಾಲಕ ಶಾಲೆಗೆ ಹೋಗುತ್ತಿದ್ದ. ಇದೇ ಗ್ರಾಮದ ನೂರ್‌ಅಹಮದ್‌, ಬಾಲಕ ವಾಸವಿದ್ದ ಕುಟುಂಬದ ಮಹಿಳೆಹೊಂದಿಗೆ ಅನೈತಿಕ ಸಂಬಂಧ ಬೆಳೆಸಿಕೊಳ್ಳಲು ಯತ್ನ ನಡೆಸಿದ್ದ. ಇದು ಸಾಧ್ಯವಾಗದ ಕಾರಣ, ಮಹಿಳೆ ಮೇಲೆ ಕೆಟ್ಟ ಹೆಸರು ತರಬೇಕು ಎಂಬ ಉದ್ದೇಶದಿಂದ ಬಾಲಕನನ್ನು ಕೊಲೆ ಮಾಡಿದ್ದಾನೆ ಎಂದು ಎಸ್ಪಿ ತಿಳಿಸಿದರು.

ಸೆ.17ರಂದು ಸೈಕಲ್‌ ಮೇಲೆ ಶಾಲೆಯಿಂದ ಮನೆಗೆ ಮರಳುತ್ತಿದ್ದ ಬಾಲಕನನ್ನು ನೂರ್‌ ಅಹಮದ್‌ ಅ‍ಪಹರಿಸಿದ್ದ. ಗಬ್ಬಿನ ಗದ್ದೆಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿದ್ದ. ಇಡೀ ದಿನ ಬಾಲಕನ ಶವ, ಸೈಕಲ್‌ ಹಾಗೂ ಶಾಲಾ ಬ್ಯಾಗನ್ನು ಹೊಲದಲ್ಲೇ ಮುಚ್ಚಿಟ್ಟಿದ್ದ. ಮಾರನೆಯ ದಿನ ತನ್ನ ಸ್ನೇಹಿತ ಹಣಮಂತನಿಗೆ ವಿಷಯ ತಿಳಿಸಿದ್ದ.

ಇಬ್ಬರೂ ಸೇರಿಕೊಂಡು ಕುಡಗೋಲಿನಿಂದ ಬಾಲಕನ ತಲೆ ಕತ್ತರಿಸಿ, ಮೈಮೇಲಿನ ಬಟ್ಟೆ ತೆಗೆದಿದ್ದರು. ತಲೆಯನ್ನು ಒಂದು ಕಡೆ, ದೇಹವನ್ನು ಇನ್ನೊಂದು ಕಡೆ ನದಿಗೆ ಎಸೆದಿದ್ದರು. ಸೈಕಲ್‌ ಹಾಗೂ ಶಾಲಾ ಬ್ಯಾಗನ್ನು ಬೇರೆಬೇರೆ ಬಾವಿಗಳಿಗೆ ಹಾಕಿದ್ದರು. ಯಾರಿಂದಲೂ ಗುರುತಿಸಲು ಆಗದಂತೆ ಸಾಕ್ಷ್ಯ ನಾಶ ಮಾಡಿದ್ದರು ಎಂದು ಡಾ.ಸಂಜೀವ ಮಾಹಿತಿ ನೀಡಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಕದ್ದ ಕಾರಿನಲ್ಲಿ ವಾಸ ಮಾಡಿದ ದಂಪತಿ..!!! ಸಿನಿಮಾ ಶೈಲಿ..!!