Webdunia - Bharat's app for daily news and videos

Install App

50 ರೂಪಾಯಿಗಾಗಿ ಯುವಕನ ಕೊಲೆ

Webdunia
ಬುಧವಾರ, 28 ಸೆಪ್ಟಂಬರ್ 2016 (07:59 IST)
ಅವರಿಗೆಲ್ಲ ರಾತ್ರಿ ಕುಡಿದು ಮೋಜು,ಮಸ್ತಿ ಮಾಡೊ ಕೆಟ್ಟ ಚಾಳಿ. ಆದರೆ ಅವರ ಈ ದುರಭ್ಯಾಸ ಅಮಾಯಕನ ಪ್ರಾಣವನ್ನೇ ಹಿಂಡಿದೆ. ತನ್ನದಲ್ಲದ ತಪ್ಪಿಗೆ ಅಮಾಯಕನೊಬ್ಬ ದಾರುಣ ಅಂತ್ಯ ಕಂಡ ಹೃದಯವಿದ್ರಾವಕ ಕಥೆ ಇದು. 

ಬೆಳಗಾವಿ ನಗರದಲ್ಲಿ ಸೆಪ್ಟೆಂಬರ್ 25ರಂದು ನಡೆದ ಘಟನೆ ಇದು. ರಾಮತೀರ್ಥ ನಗರದ ನಿವಾಸಿ ವಿಶಾಲ್ ಎಂಬಾತ ರಾತ್ರಿ 10 ಗಂಟೆ ಸುಮಾರಿಗೆ ಜಿಲ್ಲಾ ಸ್ಟೇಡಿಯಂ ಬಳಿ ತನ್ನ ಸ್ನೇಹಿತಿಗಾಗಿ ಕಾಯುತ್ತಿದ್ದ. ರಾತ್ರಿಯಾಗಿದ್ದರಿಂದ ಜನಸಂಚಾರವೂ ವಿರಳವಾಗಿತ್ತು. ಇನ್ನೇನು ಸ್ನೇಹಿತ ಅಲ್ಲಿಗೆ ಬರಬೇಕು ಎನ್ನುವಷ್ಟರಲ್ಲಿ  ಆತನ ಬಳಿ ಬಂದ ನಾಲ್ವರು ಪುಂಡರು ಕುಡಿಯಲು ಹಣ ಬೇಕು ನೀಡು ಎಂದು ಒತ್ತಾಯಿಸಿದ್ದಾರೆ. ಆದರೆ ತನ್ನ ಬಳಿ ಕೇವಲ 50 ರೂಪಾಯಿ ಇದ್ದುದರಿಂದ ವಿಶಾಲ್ ಹಣ ಕೊಡಲು ನಿರಾಕರಿಸಿದ್ದಾನೆ. 
 
ಹೀಗಾಗಿ ಸಿಟ್ಟಿಗೆದ್ದ ದುಷ್ಕರ್ಮಿಗಳು ವಿಶಾಲನಿಗೆ ಚಾಕುವಿನಿಂದ ಇರಿದಿದ್ದಾರೆ. ರಕ್ತದ ಮಡುವಿನಲ್ಲಿ ನೆಲಕ್ಕುರುಳಿದ ವಿಶಾಲ್ ಸ್ಥಳದಲ್ಲೇ ಪ್ರಾಣ ತ್ಯಜಿಸಿದ್ದಾನೆ.
 
ಘಟನೆಯ ಬಳಿಕ ಆರೋಪಿಗಳು ಪರಾರಿಯಾಗಿದ್ದರಿಂದ ಪೊಲೀಸರಿಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಆದರೂ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಪೊಲೀಸರು ಕೃತ್ಯ ನಡೆದ 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಯಶ ಕಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈಗೀನ ಮಕ್ಕಳಿಗೆ ಬುದ್ದಿ ಹೇಳುವುದು ಕಷ್ಟ, ಮೊಬೈಲ್ ಗೀಳು ಬಿಡು ಎಂದಿದ್ದಕ್ಕೆ ಯುವತಿ ಹೀಗೇ ಮಾಡೋದಾ

ಪಾಕ್‌ಗೆ ನುಗ್ಗಿ ಹೊಡೆಯಿರಿ: ಅಮಿತ್ ಶಾ ಬಳಿ ಇದನ್ನೇ ಹೇಳಿದ್ದೇನೆ ಎಂದ ಸಚಿವ ಸಂತೋಷ್‌ ಲಾಡ್‌

ಇಂದಿರಾಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಸಿದ್ದರಾಮಯ್ಯರನ್ನು ಉಚ್ಛಾಟಿಸುವ ಧಮ್‌ ಇದ್ಯಾ: ಡಿಕೆಶಿಗೆ ಅಶೋಕ್‌ ಸವಾಲು

ಗಡಿಯಲ್ಲಿ ಮತ್ತೆ ಪಾಕ್‌ ಕಿರಿಕ್‌: ಅಪ್ರಚೋದಿತ ಗುಂಡಿನ ದಾಳಿಗೆ ತಕ್ಕ ಉತ್ತರ ನೀಡಿದ ಭಾರತೀಯ ಸೇನೆ

ಕೋಲ್ಕತ್ತಾದಲ್ಲಿ ಹೊತ್ತಿ ಉರಿದ ಹೋಟೆಲ್‌ ಕಟ್ಟಡ: 15 ಮಂದಿ ಸಜೀವ ದಹನ, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments