Webdunia - Bharat's app for daily news and videos

Install App

50 ರೂಪಾಯಿಗಾಗಿ ಯುವಕನ ಕೊಲೆ

Webdunia
ಬುಧವಾರ, 28 ಸೆಪ್ಟಂಬರ್ 2016 (07:59 IST)
ಅವರಿಗೆಲ್ಲ ರಾತ್ರಿ ಕುಡಿದು ಮೋಜು,ಮಸ್ತಿ ಮಾಡೊ ಕೆಟ್ಟ ಚಾಳಿ. ಆದರೆ ಅವರ ಈ ದುರಭ್ಯಾಸ ಅಮಾಯಕನ ಪ್ರಾಣವನ್ನೇ ಹಿಂಡಿದೆ. ತನ್ನದಲ್ಲದ ತಪ್ಪಿಗೆ ಅಮಾಯಕನೊಬ್ಬ ದಾರುಣ ಅಂತ್ಯ ಕಂಡ ಹೃದಯವಿದ್ರಾವಕ ಕಥೆ ಇದು. 

ಬೆಳಗಾವಿ ನಗರದಲ್ಲಿ ಸೆಪ್ಟೆಂಬರ್ 25ರಂದು ನಡೆದ ಘಟನೆ ಇದು. ರಾಮತೀರ್ಥ ನಗರದ ನಿವಾಸಿ ವಿಶಾಲ್ ಎಂಬಾತ ರಾತ್ರಿ 10 ಗಂಟೆ ಸುಮಾರಿಗೆ ಜಿಲ್ಲಾ ಸ್ಟೇಡಿಯಂ ಬಳಿ ತನ್ನ ಸ್ನೇಹಿತಿಗಾಗಿ ಕಾಯುತ್ತಿದ್ದ. ರಾತ್ರಿಯಾಗಿದ್ದರಿಂದ ಜನಸಂಚಾರವೂ ವಿರಳವಾಗಿತ್ತು. ಇನ್ನೇನು ಸ್ನೇಹಿತ ಅಲ್ಲಿಗೆ ಬರಬೇಕು ಎನ್ನುವಷ್ಟರಲ್ಲಿ  ಆತನ ಬಳಿ ಬಂದ ನಾಲ್ವರು ಪುಂಡರು ಕುಡಿಯಲು ಹಣ ಬೇಕು ನೀಡು ಎಂದು ಒತ್ತಾಯಿಸಿದ್ದಾರೆ. ಆದರೆ ತನ್ನ ಬಳಿ ಕೇವಲ 50 ರೂಪಾಯಿ ಇದ್ದುದರಿಂದ ವಿಶಾಲ್ ಹಣ ಕೊಡಲು ನಿರಾಕರಿಸಿದ್ದಾನೆ. 
 
ಹೀಗಾಗಿ ಸಿಟ್ಟಿಗೆದ್ದ ದುಷ್ಕರ್ಮಿಗಳು ವಿಶಾಲನಿಗೆ ಚಾಕುವಿನಿಂದ ಇರಿದಿದ್ದಾರೆ. ರಕ್ತದ ಮಡುವಿನಲ್ಲಿ ನೆಲಕ್ಕುರುಳಿದ ವಿಶಾಲ್ ಸ್ಥಳದಲ್ಲೇ ಪ್ರಾಣ ತ್ಯಜಿಸಿದ್ದಾನೆ.
 
ಘಟನೆಯ ಬಳಿಕ ಆರೋಪಿಗಳು ಪರಾರಿಯಾಗಿದ್ದರಿಂದ ಪೊಲೀಸರಿಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಆದರೂ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಪೊಲೀಸರು ಕೃತ್ಯ ನಡೆದ 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಯಶ ಕಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments