Webdunia - Bharat's app for daily news and videos

Install App

ಮಳೆಗಾಗಿ ಪ್ರಾರ್ಥಿಸಿ ಬಾಲಕನ ಬೆತ್ತಲೆ ಮೆರವಣಿಗೆ (ವಿಡಿಯೋ)

Webdunia
ಶುಕ್ರವಾರ, 17 ಜೂನ್ 2016 (12:51 IST)
ಆಧುನಿಕತೆ ಈ ಪರಿಯಲ್ಲಿ ಬೆಳೆದಿದ್ದರೂ ಜನರು ಮೂಡನಂಬಿಕೆಗಳಿಗೆ ಇನ್ನು ಕೂಡ ದಾಸರಾಗಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿಯೇ. ಚಿತ್ರದುರ್ಗದಲ್ಲಿ ನಡೆಸಿದ ಈ ಅಂಧಾಚರಣೆ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ.

ಮಳೆಗಾಗಿ ಪ್ರಾರ್ಥಿಸಿ ಬಾಲಕನೊಬ್ಬನನ್ನು ಬೆತ್ತಲೆ ಮಾಡಿ ಊರ ತುಂಬ ಮೆರವಣಿಗೆ ಮಾಡಿದ ಘಟನೆ ಚಿತ್ರದುರ್ಗದ ಪಂಡರಹಳ್ಳಿಯಲ್ಲಿ ನಡೆದಿದೆ. ಈ ಆಚರಣೆಯ ದೃಶ್ಯಾವಳಿಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಹರಿದಾಡುತ್ತಿದ್ದು ಕೃತ್ಯಕ್ಕೆ ದೇಶವ್ಯಾಪಿ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. 
 
ಬರಪೀಡಿತ ಗ್ರಾಮದಲ್ಲಿ ಮಳೆಗಾಗಿ ಪ್ರಾರ್ಥನೆ ಸಲ್ಲಿಸಿದ ಜನರು ದೇವರನ್ನು ಮೆಚ್ಚಿಸಲು ಪುಟ್ಟ ಬಾಲಕನನ್ನು ನಗ್ನವಾಗಿ ಮೆರವಣಿಗೆ ಮಾಡಿಸಿದ್ದಾರೆ. ಕಳೆದ ಜೂನ್ 10 ರಂದು ಈ ಘಟನೆ ನಡೆದಿತ್ತು. 
 
ವಿಡಿಯೋದಲ್ಲೇನಿದೆ?: ಬಾಲಕನ ಮೇಲೆ ಮೇಲೆ ನೀರು ಸುರಿವ ಗ್ರಾಮಸ್ಥರು ಆತನಿಗೆ ಹೂಮಾಲೆ ತೊಡಿಸಿ, ವಿಗ್ರಹವೊಂದನ್ನು ತಲೆಯ ಮೇಲಿಟ್ಟು ಬಾಲಕನ ಬೆತ್ತಲೆ ಮೆರವಣಿಗೆ ಮಾಡಿಸಿದ್ದಾರೆ. ಬಳಿಕ ಆತನಿಗೆ ಹೊಸ ಬಟ್ಟೆ ನೀಡಲಾಗಿದೆ.
 
ಇದು ಮಳೆಗಾಗಿ ನಡೆದ ವಿಶೇಷ ಪ್ರಾರ್ಥನೆ ಎನ್ನುತ್ತಾರೆ ಪಂಡರಹಳ್ಳಿ ಗ್ರಾಮಸ್ಥರು. ಈ ಆಚರಣೆಯಿಂದ ಗ್ರಾಮದಲ್ಲಿ ಮಳೆಯಾಗುತ್ತದೆ ಎಂಬುದು ಅವರ ನಂಬಿಕೆ. 
 
ಮಳೆಗಾಗಿ ಪ್ರಾರ್ಥಿಸಿ ಬಾಲಕನ ಬೆತ್ತಲೆ ಮೆರವಣಿಗೆ (ವಿಡಿಯೋ)

 

ಕೃಪೆ:ANI NEWS

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ