Webdunia - Bharat's app for daily news and videos

Install App

ನೀರಿನಲ್ಲಿ ಮುಳುಗಿ ಬಾಲಕರ ಸಾವು

Webdunia
ಬುಧವಾರ, 24 ಮೇ 2023 (12:43 IST)
ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವಿಗೀಡಾಗಿರುವ ಘಟನೆ ಮೈಸೂರು ಜಿಲ್ಲೆ ನರಸೀಪುರ ತಾಲ್ಲೂಕಿನ ತಲಕಾಡಿನ ಕಾವೇರಿ ನಿಸರ್ಗಧಾಮದಲ್ಲಿ ನಡೆದಿದೆ. ಲೋಹಿತ್(15), ಯತೀಶ್(13) ಮೃತ ಬಾಲಕರಾಗಿದ್ದು, ಬೆಂಗಳೂರಿನ ನಂದಿನಿ ಲೇಔಟ್ ನಿವಾಸಿ ರವಿಗೌಡರ ಪುತ್ರರು ಎಂದು ತಿಳಿದುಬಂದಿದೆ. ಸ್ನೇಹಿತರ ಜೊತೆ ಬೆಂಗಳೂರಿನಿಂದ ತಲಕಾಡಿಗೆ ಬಾಲಕರು ಆಗಮಿಸಿದ್ದರು. ಆಳ ನೋಡದೆ ಈಜಲು ನದಿಗೆ ಇಳಿದಿದ್ದ ಬಾಲಕರು ಆಳವಿದ್ದ ಕಡೆಗೆ ಈಜಲು ಹೋಗಿ ಮುಳುಗಿ ಸಾವಿಗೀಡಾಗಿದ್ದಾರೆ.ಇನ್ನು ಈ ವೇಳೆ ಅಲ್ಲೇ ಇದ್ದ ಅಂಬಿಗರಿಂದ 6 ಬಾಲಕರ ರಕ್ಷಣೆ ಮಾಡಲಾಗಿದೆ. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ತಲಕಾಡು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments