Publish Date: Wed, 17 Oct 2018 (17:59 IST)
Updated Date: Wed, 17 Oct 2018 (18:01 IST)
ಕಾಲುವೆಯಲ್ಲಿ ಈಜಲು ಹೋದ ಇರ್ವರು ಬಾಲಕರು ನೀರು ಪಾಲಾದ ಘಟನೆ ನಡೆದಿದೆ.
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಆಲಮಟ್ಟಿ ಎಡದಂಡೆ ಕಾಲುವೆಯಲ್ಲಿ ಈ ಘಟನೆ ನಡೆದಿದೆ.
ಮೃತ ಬಾಲಕರು ಚಿಮ್ಮಲಗಿ ಗ್ರಾಮದವರೆಂದು ತಿಳಿದುಬಂದಿದೆ.
ಆಲಮಟ್ಟಿ ಜಲಾಶಯದ ಎಡದಂಡೆ ಕಾಲುವೆಯಲ್ಲಿ ಈಜಲು ತೆರಳಿದ್ದ ಬಾಲಕರು ನೀರಿನ ಸೆಳೆತಕ್ಕೆ ಸಿಕ್ಕು ನೀರುಪಾಲಾಗಿದ್ದಾರೆ.
ಮೃತ ದೇಹಗಳ ಹುಡುಕಾಟದಲ್ಲಿ ನಿಡಗುಂದಿ ಪೊಲೀಸ್ ಠಾಣೆ ಸಿಬ್ಬಂದಿ ಹಾಗೂ ಮೀನುಗಾರರು ನಿರತರಾಗಿದ್ದಾರೆ. ಈ ಕುರಿತು ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.