ಜೂನ್ 2 ರಿಂದ ಬಿ ಪಿ ಎಲ್ ಅಪ್ಲಿಕೇಶನ್ ಓಪನ್

Webdunia
ಶುಕ್ರವಾರ, 26 ಮೇ 2023 (18:30 IST)
ರಾಜ್ಯದಾದ್ಯಂತ ಬಿಪಿಎಲ್ ಕಾರ್ಡ್ ಗೆ ಫುಲ್ ಡಿಮ್ಯಾಂಡ್ ಶುರುವಾಗಿದೆ. ಗ್ಯಾರಂಟಿ ಯೋಜನೆಯ ಲಾಭ ಪಡೆಯಲು ಜನ ಸೈಬರ್ ಸೆಂಟರ್ ಗಳತ್ತ ಮುಖ ಮಾಡುತ್ತಿದ್ದಾರೆ, ಆದ್ರೆ ಬಿಬಿಎಲ್ ಅಪ್ಲಿಕೇಶನ್ ಕ್ಲೋಸ್ ಆಗಿದೆ .ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಯ ಲಾಭ ಪಡೆಯಲು ಜನ‌ ಸೈಬರ್ ಸೆಂಟರ್ ಗಳತ್ತ ಮುಖ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರ್ತಿದ್ದಂತೆ,  ಚುನಾವಣೆ ಸಂದರ್ಭದಲ್ಲಿ ತಾವು ನೀಡಿದ್ದ ಐದು ಗ್ಯಾರಂಟಿಗಳ ಲಾಭವನ್ನ ಪಡೆಯಲು ಜನ ಉತ್ಸುಕರಾಗಿದ್ದಾರೆ. ಇದೀಗಾ ಜನ 
ಬಿಪಿಎಲ್ ಕಾರ್ಡ್ ಮಾಡಿಸಲು ಸೈಬರ್ ಸೆಂಟರ್ ಗಳಲ್ಲಿ ಮುಗಿಬೀಳುತಿದ್ದಾರೆ.

ನಿತ್ಯ ೨೦ ರಿಂದ ೩೦ ಜನ ಒಂದೊಂದು ಸೈಬರ್ ಸೆಂಟರ್ ಗಳಿಗೆ ಅರ್ಜಿ ಹಾಕಲು ಬರ್ತಿದ್ದಾರೆ. ಹೊಸ ಕಾರ್ಡ್ ಮಾಡಿಸಲು ಜನ ಬೆಂಗಳೂರು ಒನ್ ಹಾಗೂ ಸೈಬರ್ ಸೆಂಟರ್ಗೆ ಧಾವಿಸುತ್ತಿದ್ದಾರೆ. ಆದ್ರೆ, ಸರ್ಕಾರದಿಂದ ಹೊಸ ರೇಷನ್ ಕಾಡ್೯ಗೆ ಅರ್ಜಿ ಸಲ್ಲಿಸಲು ಇನ್ನು ಯಾವುದೇ ಸೂಚನೆ ನೀಡಿಲ್ಲ. ಹೀಗಾಗಿ ಅರ್ಜಿ ಸಲ್ಲಿಸಲು ಬಂದವರು ವಾಪಾಸ್ ಮರಳುತ್ತಿದ್ದಾರೆ. ಇನ್ನೂ ಕೆಲವು ಸೈಬರ್ ಸೆಂಟರ್ ಮಾಲೀಕರು ಕೂಡ ಹೊಸ ಅರ್ಜಿಗಳಿಗೆ ಅವಕಾಶ ನೀಡಿದೆಯೋನೋ ಅಂತ ಇಲಾಖಾ ವೆಬ್ ಸೈಟ್ ಓಪನ್ ಮಾಡಿ ಪರಿಶೀಲಿಸ್ತಿದ್ದಾರೆ.

ಹೀಗಾಗಿ ಸೈಬರ್ ಸೆಂಟರ್ ಗಳಲ್ಲಿ ಸೈಬರ್ ಸ್ಲೋ ಪ್ರಾಬ್ಲಂ ಶುರುವಾಗಿದೆ. ಬಿಪಿಎಲ್ ಕಾರ್ಡ್ ಮಾಡಿಸಲು ಇಷ್ಟು ದಿನ ಗ್ರಾಮೀಣ ಭಾಗಗಳಲ್ಲಿ ಜನ ಮುಗಿಬಿದ್ದಿದ್ರು.‌ ಇದೀಗಾ ಬೆಂಗಳೂರಿನಲ್ಲೂ ಈ ಪರಿಸ್ಥಿತಿ ನಿರ್ಮಾಣವಾಗ್ತಿದೆ.ರಾಜ್ಯ ಸರ್ಕಾರ ತಾವು ನೀಡಿದ ಐದು ಗ್ಯಾರಂಟಿಗಳನ್ನು ಮೊದಲ ದಿನವೇ ಪೂರೈಸುವ ಘೋಷಣೆ ಮಾಡಿದ್ದರಿಂದ ತಮಗೆ ಉಚಿತ ವಿದ್ಯುತ್, ಗೃಹಲಕ್ಷ್ಮಿ, ಮಹಿಳೆಯರಿಗೆ ಉಚಿತ ಬಸ್ ಪಾಸ್, 10 ಕೆಜಿ ಅಕ್ಕಿ ಸಿಗುವ ನಿರೀಕ್ಷೆಯಲ್ಲಿ ಜನರಿದ್ದಾರೆ. ಹೀಗಾಗಿ ಈ ಯೋಜನೆಗೆ ಅಗತ್ಯವಾಗಿ ಬೇಕಾದ ಬಿಪಿಎಲ್ ಕಾರ್ಡ್ ಬೇಡಿಕೆ ಹೆಚ್ಚಾಗಿದ್ದು, ಆಹಾರ ಇಲಾಖೆ ಕಚೇರಿಗೆ ಮುಗಿಬೀಳುತಿದ್ದಾರೆ.
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments