Webdunia - Bharat's app for daily news and videos

Install App

ಬಿಪಿಎಲ್, ಎಪಿಎಲ್ ಕಾರ್ಡ್ ದಾರರ ಗಮನಕ್ಕೆ: ಜನವರಿ 31 ರೊಳಗೆ ಈ ಕೆಲಸ ಮಾಡದಿದ್ದರೆ ರೇಷನ್ ಸಿಗಲ್ಲ

Krishnaveni K
ಗುರುವಾರ, 16 ಜನವರಿ 2025 (10:11 IST)
ಬೆಂಗಳೂರು: ರಾಜ್ಯದ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ದಾರರ ಗಮನಕ್ಕೆ ಈ ಒಂದು ಕೆಲಸ ಮಾಡದೇ ಇದ್ದರೆ ಜನವರಿ 31 ರಿಂದ ನಿಮಗೆ ರೇಷನ್ ಸಿಗಲು ಕಷ್ಟವಾಗಬಹುದು. ಇಲ್ಲಿದೆ ವಿವರ.

ಎಲ್ಲಾ ರೇಷನ್ ಕಾರ್ಡ್ ದಾರರು ತಮ್ಮ ಕುಟುಂಬ ಸದಸ್ಯರ ಇ-ಕೆವೈಸಿ ಮಾಡುವುದು ಕಡ್ಡಾಯವಾಗಿದೆ. ಜನವರಿ 31 ರೊಳಗಾಗಿ ಇ ಕೆವೈಸಿ ಮಾಡಿಸಬೇಕು ಎಂದು ಆಹಾರ ಇಲಾಖೆ ಈಗಾಗಲೇ ಎಚ್ಚರಿಕೆ ನೀಡಿದೆ.

ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಮಾತ್ರ ಬಿಪಿಎಲ್ ಕಾರ್ಡ್ ಸಿಗಬೇಕು ಎಂದು ಸಿಎಂ ಸಿದ್ದರಾಮಯ್ಯ ಇತ್ತೀಚೆಗಷ್ಟೇ ಕಟ್ಟುನಿಟ್ಟಾಗಿ ಸೂಚಿಸಿದ್ದರು. ಹೀಗಾಗಿ ಎಲ್ಲರೂ ಕಡ್ಡಾಯವಾಗಿ ತಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಬೇಕು.

ನ್ಯಾಯಬೆಲೆ ಅಂಗಡಿಗೆ ತೆರಳಿ ಬೆರಳಚ್ಚು ನೀಡಿ ನವೀಕರಣ ಮಾಡಿಸಿಕೊಳ್ಳಬಹುದು. ಇ-ಕೆವೈಸಿ ಮಾಡಿಸಿಕೊಳ್ಳದ ಪಡಿತರ ಚೀಟಿದಾರರಿಗೆ ಮುಂದಿನ ತಿಂಗಳಿನಿಂದ ರೇಷನ್ ಸಿಗದು.

ಹಾಗಾಗಿ ಸರ್ಕಾರ ಈಗ ಕೊಟ್ಟಿರುವ ಜನವರಿ 31 ರ ಗಡುವಿನೊಳಗಾಗಿ ನಿಮ್ಮ ರೇಷನ್ ಕಾರ್ಡ್ ನಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸಿಕೊಳ್ಳಿ. ಇ-ಕೆವೈಸಿ ಮತ್ತು ಜಾತಿವಾರು ಮ್ಯಾಪಿಂಗ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments