Webdunia - Bharat's app for daily news and videos

Install App

ತೆರಿಗೆ ಕಟ್ಟುವವರು ಯಾರೂ ಮನುಷ್ಯರಲ್ವಾ: ಬಿಪಿಎಲ್ ಕಾರ್ಡ್ ರದ್ದತಿಗೆ ಕೇಳಿಬಂತು ಆಕ್ರೋಶ

Krishnaveni K
ಸೋಮವಾರ, 18 ನವೆಂಬರ್ 2024 (09:15 IST)
ಬೆಂಗಳೂರು: ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಮಾಡಿದ್ದರಿಂದ ಸಾವಿರಾರು ಮಂದಿಯ ಬಿಪಿಎಲ್ ಕಾರ್ಡ್ ರಾತ್ರೋ ರಾತ್ರಿ ಎಪಿಎಲ್ ಕಾರ್ಡ್ ಆಗಿ ಪರಿವರ್ತನೆಯಾಗಿದೆ. ಈ ಬಗ್ಗೆ ಈಗ ಸಾರ್ವಜನಿಕರಿಂದ ಆಕ್ರೋಶ ಕೇಳಿಬಂದಿದೆ.

ರಾಜ್ಯ ಸರ್ಕಾರದ ನೂತನ ಮಾನದಂಡಗಳ ಪ್ರಕಾರ 1 ಲಕ್ಷ ಆದಾಯ ಮಿತಿ, ವಾಣಿಜ್ಯ ಬಳಕೆಗಾಗಿ ನಾಲ್ಕು ಚಕ್ರದ ವಾಹನ ಇರುವವರಿಗೆ, ತೆರಿಗೆ ಪಾವತಿಸುವವರಿಗೆ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗಿದೆ. ಇದರಿಂದಾಗಿ ಎಷ್ಟೋ ಜನ ಬಿಪಿಎಲ್ ಕಾರ್ಡ್ ಅರ್ಹತೆ ಕಳೆದುಕೊಂಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ, ತೆರಿಗೆ ಕಟ್ಟುವವರಿಗೆ ಯಾಕೆ ಬಿಪಿಎಲ್ ಕಾರ್ಡ್ ಕೊಡಬೇಕು? ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಸಾರ್ವಜನಿಕರಿಂದ ಆಕ್ರೋಶ ಕೇಳಿಬಂದಿದೆ. ತೆರಿಗೆ ಕಟ್ಟುವವರು ಎಲ್ಲರೂ ಶ್ರೀಮಂತರಲ್ಲ. ಇದರಲ್ಲಿ ಮಧ್ಯಮ ವರ್ಗದವರೂ ಹೆಚ್ಚಾಗಿ ಇದ್ದಾರೆ. ತೆರಿಗೆ ಕಟ್ಟುವವರ ತೆರಿಗೆ ದುಡ್ಡು ಬೇಕು, ಆದರೆ ಅವರಿಗೆ ಯಾವ ಸೌಲಭ್ಯವೂ ಕೊಡಲ್ಲ ಎಂದರೆ ಹೇಗೆ? ಅವರು ಮನುಷ್ಯರಲ್ವಾ?

ನಿಮ್ಮ ಗ್ಯಾರಂಟಿ ಜಾರಿಗೆ ಮುನ್ನವೇ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಮಾಡಿದ್ದರೆ ನಿಮ್ಮ ನಿರ್ಧಾರವನ್ನು ಒಪ್ಪಬಹುದಿತ್ತು. ಆದರೆ ಇಷ್ಟು ದಿನದ ಬಳಿಕ ಪರಿಷ್ಕರಣೆ ಮಾಡಿರುವುದು ನೋಡಿದರೆ ಈಗ ಗ್ಯಾರಂಟಿ ಯೋಜನೆಗೆ ಹಣದ ಕೊರತೆಯಾಗಿದೆ ಎಂದೇ ಅರ್ಥ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯಾದ್ಯಂತ ಇಂದಿನ ಹವಾಮಾನ ವರದಿ ಇಲ್ಲಿದೆ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂದಿನ ಸುದ್ದಿ
Show comments