Webdunia - Bharat's app for daily news and videos

Install App

ಸರ್ಕಾರದ ಗ್ಯಾರಂಟಿ ಹೊರೆಯಿಂದ ಬಡವರ ಬಿಪಿಎಲ್‌ ಕಾರ್ಡ್‌ಗೆ ಬರೆ: ಜೆಡಿಎಸ್‌ ಆಕ್ರೋಶ

Sampriya
ಗುರುವಾರ, 21 ನವೆಂಬರ್ 2024 (17:42 IST)
ಬೆಂಗಳೂರು: ರಾಜ್ಯದಲ್ಲಿ ವಚನ ಭ್ರಷ್ಟ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ತೊಘಲಕ್‌ ಆಡಳಿತದ ಹುಚ್ಚಾಟಗಳು ಮಿತಿಮೀರಿದೆ ಎಂದು ಜೆಡಿಎಸ್‌ ಆಕ್ರೋಶ ವ್ಯಕ್ತಪಡಿಸಿದೆ.

ಯಾವುದೇ ರೀತಿಯ ಸೂಕ್ತ ದಾಖಲೆಗಳ ಪರಿಶೀಲನೆ ಮಾಡದೇ ಏಕಾಏಕಿ 22 ಲಕ್ಷ ಬಿಪಿಎಲ್‌ ಕಾರ್ಡ್‌ಗಳನ್ನು  ಕಾನ್ಸಲ್‌ ಮಾಡಿರುವುದು ಕಾಂಗ್ರೆಸ್‌ ಸರ್ಕಾರದ ಜನವಿರೋಧಿ ನಡೆ ಎಂದು ಹೇಳಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಜೆಡಿಎಸ್ ಪೋಸ್ಟ್ ಹಾಕಿದೆ: ರಾಜ್ಯದಲ್ಲಿ ವಚನ ಭ್ರಷ್ಟ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್
 ಸರ್ಕಾರದ ತೊಘಲಕ್‌ ಆಡಳಿತದ ಹುಚ್ಚಾಟಗಳು ಮಿತಿಮೀರಿದೆ.


ಯಾವುದೇ ರೀತಿಯ ಸೂಕ್ತ ದಾಖಲೆಗಳ ಪರಿಶೀಲನೆ ಮಾಡದೇ ಏಕಾಏಕಿ 22 ಲಕ್ಷ ಬಿಪಿಎಲ್‌ ಕಾರ್ಡ್‌ಗಳನ್ನು  ಕಾನ್ಸಲ್‌ ಮಾಡಿರುವುದು ಕಾಂಗ್ರೆಸ್‌ ಸರ್ಕಾರದ ಜನವಿರೋಧಿ ನಡೆ.

22 ಲಕ್ಷ ಕಾರ್ಡ್‌ ರದ್ದು ಮಾಡುವ ಮೊದಲು ಅನರ್ಹರ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆಯೇ ? ಅನರ್ಹರು ಎಂದು ಯಾವೆಲ್ಲಾ ಮಾನದಂಡಗಳ ಮೇಲೆ ಪರಿಗಣಿಸಲಾಯಿತು ?

ದಿನಕ್ಕೊಂದು ಆದೇಶಗಳು,  ಗಂಟೆಗೆ ಒಬ್ಬರಂತೆ ಸಚಿವರಿಂದ ಸಮರ್ಥನೆ.

 ಸರ್ಕಾರಿ ನೌಕರರು ಮತ್ತು ತೆರಿಗೆದಾರರ ಬಿಪಿಎಲ್‌ ಕಾರ್ಡ್‌ಗಳನ್ನಷ್ಟೇ ರದ್ದು ಮಾಡಿದ್ದೇವೆ ಎನ್ನುತ್ತಿರುವ ಸಿಎಂ ಸಿದ್ದರಾಮಯ್ಯ, ಇನ್ನುಳಿದ ಬಡವರ ಕಾರ್ಡ್‌ಗಳನ್ನು ಏಕಾಏಕಿ ರದ್ದು ಮಾಡುವ ಅನಿವಾರ್ಯತೆ ಏನಿತ್ತು ?   

ಈಗ ಜನಾಕ್ರೋಶ ಹೆಚ್ಚಾಗುತ್ತಿದ್ದಂತೆ ಬಿಪಿಎಲ್‌ ಕಾರ್ಡ್‌ ರದ್ದಾಗಿದ್ದರೇ ಮರುಳಿಸಬೇಕು ಎಂದು ಮುಖ್ಯಮಂತ್ರಿಗಳೇ ಅಧಿಕಾರಿಗಳಿಗೆ ಸೂಚನೆ ನೀಡುತ್ತಿರುವುದನ್ನು ಗಮನಿಸಿದರೇ ಉದ್ದೇಶ ಪೂರ್ವಕವಾಗೇ ಬಡವರ ಅನ್ನಕ್ಕೆ ಸರ್ಕಾರ ಕಲ್ಲು ಹಾಕಿದೆ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ.

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಹೊರೆಯಿಂದ, ಲಕ್ಷಾಂತರ ಬಡವರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುವುದು ಯಾವ ನ್ಯಾಯ ಎಂದು ಪ್ರಶ್ನೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

Tiger Attack: ಕೇರಳದಂತೆ ಚಾಮರಾಜನಗರದಲ್ಲೂ ನಡೆಯಿತು ದುರ್ಘಟನೆ

Rajastan: ಜೈಪುರದಿಂದ ಪ್ರವಾಸಕ್ಕೆ ಬಂದಿದ್ದ ಎಂಟು ಯುವಕರು ಬನಾಸ್‌ ನದಿಯಲ್ಲಿ ಮುಳುಗಿ ದಾರುಣ ಸಾವು

ಮುಂದಿನ ಸುದ್ದಿ
Show comments