ಸರ್ಕಾರೀ ನೌಕರರಾಗಿದ್ದು ಬಿಪಿಎಲ್ ಕಾರ್ಡ್ ಇದ್ದರೆ ಇನ್ನು ಈ ಶಿಕ್ಷೆ ಗ್ಯಾರಂಟಿ

Krishnaveni K
ಮಂಗಳವಾರ, 3 ಡಿಸೆಂಬರ್ 2024 (08:46 IST)
ಬೆಂಗಳೂರು: ಕರ್ನಾಟಕ ಸರ್ಕಾರ ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆ ನಡೆಸುತ್ತಿದ್ದು, ಸರ್ಕಾರೀ ನೌಕರರು, ತೆರಿಗೆದಾರರ ಬಳಿ ಬಿಪಿಎಲ್ ಇದ್ದರೆ ಅದನ್ನು ಎಪಿಎಲ್ ಗೆ ವರ್ಗಾಯಿಸುವ ಕೆಲಸ ಮಾಡುತ್ತಿದೆ. ಈ ನಡುವೆ ಬಿಪಿಎಲ್ ಕಾರ್ಡ್ ಹೊಂದಿರುವ ಸರ್ಕಾರೀ ನೌಕರರಿಗೆ ಬಿಗ್ ಶಾಕ್ ಸಿಕ್ಕಿದೆ.

ಇತ್ತೀಚೆಗೆ ಬಿಪಿಎಲ್ ಕಾರ್ಡ್ ರದ್ದಾಗಿರುವುದರ ಬಗ್ಗೆ ಸರ್ಕಾರದ ವಿರುದ್ಧ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಇದಾದ ಬಳಿಕ ಎಚ್ಚೆತ್ತುಕೊಂಡ ಸರ್ಕಾರ ರದ್ದಾಗಿರುವ ಬಿಪಿಎಲ್ ಕಾರ್ಡ್ ದಾರರ ಪೈಕಿ ನಿಜವಾಗಿಯೂ ಅರ್ಹರು ಯಾರು ಎಂದು ಗುರುತಿಸಿ ಅವರಿಗೆ ಮರಳಿ ಬಿಪಿಎಲ್ ಕಾರ್ಡ್ ಕೊಡುವ ಕೆಲಸ ಮಾಡುತ್ತಿದೆ.

ಆದರೆ ಸರ್ಕಾರದ ಮಾನದಂಡದ ಪ್ರಕಾರ ಸರ್ಕಾರೀ ನೌಕರರು, ತೆರಿಗೆ ಪಾವತಿ ಮಾಡುವವರಿಗೆ ಬಿಪಿಎಲ್ ಕಾರ್ಡ್ ರದ್ದಾಗಿದೆ. ಇದೀಗ ಸರ್ಕಾರೀ ನೌಕರಿಯಲ್ಲಿದ್ದುಕೊಂಡೂ ಬಿಪಿಎಲ್ ಕಾರ್ಡ್ ಪಡೆದಿದ್ದವರಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. ಬಿಪಿಎಲ್ ಕಾರ್ಡ್ ಹೊಂದಿದ್ದ ನೌಕರರ ರೇಷನ್ ಕಾರ್ಡ್ ನ್ನು ಎಪಿಎಲ್ ಗೆ ವರ್ಗಾಯಿಸಿರುವುದಲ್ಲದೆ ದಂಡದ ಬರೆ ನೀಡಿದೆ.

ಈ ರೀತಿ ಇದುವರೆಗೆ ಶಿವಮೊಗ್ಗ ಜಿಲ್ಲೆಯೊಂದರಲ್ಲೇ 4,12, 890 ರೂ. ದಂಡ ವಿಧಿಸಲಾಗಿದೆ ಎಂದು ತಿಳಿದುಬಂದಿದೆ. ಸುಮಾರು 72 ಸರ್ಕಾರಿ ನೌಕರರಿಗೆ ದಂಡ ವಿಧಿಸಲಾಗಿದೆ. ಬಿಪಿಎಲ್ ಕಾರ್ಡ್ ಅರ್ಹ ಬಡವರಿಗೆ ಮಾತ್ರ ಲಭಿಸುವಂತಾಗಬೇಕು. ಬಿಪಿಎಲ್ ಕಾರ್ಡ್ ಮೂಲಕ ಅನರ್ಹರೂ ಉಚಿತ ಯೋಜನೆಗಳ ಲಾಭ ಪಡೆಯುತ್ತಿದ್ದರೆ ಅದು ಸರ್ಕಾರದ ಬೊಕ್ಕಸಕ್ಕೆ ಹೊರೆ. ಇದರ ಬದಲು ಆ ಯೋಜನೆಗಳು ಬಡವರಿಗೆ ಸಿಕ್ಕಿದರೆ ನಿಜವಾಗಿಯೂ ಬಿಪಿಎಲ್ ಕಾರ್ಡ್ ಗೆ ಅರ್ಥ ಬಂದಂತಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments