ಬಿಪಿಎಲ್ ಕಾರ್ಡ್ ನಲ್ಲಿ ನಾಳೆಯಿಂದಲೇ ಬದಲಾವಣೆ: ಇಲ್ಲಿದೆ ಡೀಟೈಲ್ಸ್

Krishnaveni K
ಸೋಮವಾರ, 18 ನವೆಂಬರ್ 2024 (14:47 IST)
ಬೆಂಗಳೂರು: ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಪರಿಷ್ಕರಣೆ ವಿಚಾರ ಈಗ ಭಾರೀ ಸುದ್ದಿಯಾಗಿದೆ. ಇದರ ನಡುವೆ ನಾಳೆಯಿಂದಲೇ ಬಿಪಿಎಲ್ ಕಾರ್ಡ್ ಬದಲಾವಣೆ ಆರಂಭವಾಗಲಿದೆ. ಇಲ್ಲಿದೆ ಇದರ ಬಗ್ಗೆ ಮಾಹಿತಿ.

ಬಿಪಿಎಲ್ ಕಾರ್ಡ್ ಅರ್ಹರಿಗೆ ಮಾತ್ರ ಲಭಿಸಬೇಕು. ಬಡವರಿಗೆ ಬಿಪಿಎಲ್ ಕಾರ್ಡ್ ನ ಫಲ ಸಿಗಬೇಕು ಎಂಬುದು ನಮ್ಮ ಉದ್ದೇಶ. ಬಡವರಿಗೆ ಅನ್ಯಾಯವಾಗಲು ಬಿಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಈಗಾಗಲೇ ಘೋಷಿಸಿದ್ದಾರೆ. ಆದರೆ ರಾತ್ರೋ ರಾತ್ರಿ ಬಿಪಿಎಲ್ ನಿಂದ ಎಪಿಎಲ್ ಆಗಿ ಬದಲಾವಣೆಯಾಗಿರುವುದರ ಬಗ್ಗೆ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾಗಿದೆ.

ಇದರ ನಡುವೆ ನಾಳೆಯಿಂದಲೇ ಸರ್ಕಾರ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಶುರು ಮಾಡಲಿದೆ. ಯಾರು ತೆರಿಗೆ ಕಟ್ಟುತ್ತಾರೋ, ಐಟಿ ಜೊತೆಗೆ ಜಿಎಸ್ ಟಿ ಇರುವ 10 ಸಾವಿರ ಕಾರ್ಡ್ ಗಳನ್ನು ರದ್ದಾಗಿದೆ.  ನಾಳೆಯಿಂದಲೇ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕಾರ್ಯಾಚರಣೆ ಶುರು ಮಾಡಲಿದೆ.

ಉಳ್ಳವರಿಗೆ ಬಿಪಿಎಲ್ ಕಾರ್ಡ್ ನ ಅಗತ್ಯವಿಲ್ಲ ಎನ್ನುವುದು ಸರಿಯಾದ ಕ್ರಮವಾಗಿದೆ. ಆದರೆ ಇದರ ನಡುವೆ ಕೆಲವರಿಗೆ ಬಡವರಿಗೂ ಅನ್ಯಾಯವಾಗಿರುವ ಘಟನೆಗಳು ಕೇಳಿಬಂದಿವೆ. ದಿನದ ವೇತನ ನಂಬಿಕೊಂಡು ಬದುಕುವವರಿಗೆ ಈಗ ಬಿಪಿಎಲ್ ನಿಂದ ಏಕಾಏಕಿ ಎಪಿಎಲ್ ಗೆ ಬದಲಾವಣೆಯಾಗಿರುವುದರಿಂದ ತೊಂದರೆಯಾಗಿದೆ. ಅಂತಹವರಿಗೆ ಸರ್ಕಾರ ಸೂಕ್ತ ಪರಿಹಾರ ಒದಗಿಸಲಿ ಎನ್ನುವುದೇ ಎಲ್ಲರ ಆಶಯ.

ಇನ್ನೊಂದೆಡೆ ಆಹಾರ ಮತ್ತು ನಾಗರಿಕಾ ಇಲಾಖೆ ಸಚಿವ ಕೆಎಚ್ ಮುನಿಯಪ್ಪ, ‘ಯಾವುದೇ ಕಾರಣಕ್ಕೂ ಬಿಪಿಎಲ್, ಎಪಿಎಲ್ ಕಾರ್ಡ್ ರದ್ದಾಗಲ್ಲ. ಕೆಲವರು ಬಿಪಿಎಲ್ ಗೆ ಅರ್ಹರಲ್ಲದವರಿದ್ದಾರೆ. ಅವರನ್ನು ತೆಗೆದು ಎಪಿಎಲ್ ಗೆ ಹಾಕ್ತೀವಷ್ಟೇ. ಆದರೆ ಬಿಪಿಎಲ್, ಎಪಿಎಲ್ ಕಾರ್ಡ್ ರದ್ದು ಮಾಡಿಲ್ಲ. ಇದು ರಾಜಕೀಯವಾಗಿ ಮಾತನಾಡುತ್ತಿದ್ದಾರಷ್ಟೇ’ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಬ್ರದರ್ಸ್ ತಲೆ ಮೇಲೆ ಕೈಯಿಟ್ಟು ಆಣೆ ಮಾಡಿದ್ರು ಸಿದ್ದರಾಮಯ್ಯ: ಎಚ್ ವಿಶ್ವನಾಥ್ ಹೊಸ ಬಾಂಬ್

ಎಟಿಎಂ ವ್ಯಾನ್‌ನ 7.11 ಕೋಟಿ ದರೋಡೆ ಪ್ರಕರಣ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಜೆಡಿಎಸ್‌ಗೆ 25 ವರ್ಷಗಳ ಸಂಭ್ರಮ, ಶಾಲು ತಿರುಗಿಸಿ ದೇವೇಗೌಡರ ಸಂಭ್ರಮ

ಐಎಸ್‌ಐ ಜತೆ ನಂಟು ಬೆಳೆಸಿ ಖತರ್ನಾಕ್ ಕೆಲಸ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್‌

ಮೀನು ರಫ್ತಿನಲ್ಲಿ ರಾಜ್ಯ ನಾಲ್ಕನೇ ಸ್ಥಾನದಲ್ಲಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments