Webdunia - Bharat's app for daily news and videos

Install App

ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಬಿಆರ್‌ ಪಾಟೀಲ್‌ಗೆ ಹೊಸ ಜವಾಬ್ದಾರಿ

Sampriya
ಸೋಮವಾರ, 17 ಫೆಬ್ರವರಿ 2025 (17:41 IST)
Photo Courtesy X
ಬೆಂಗಳೂರು: ಈಚೆಗೆ ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಸಿದ್ದರಾಮಯ್ಯ ಆಪ್ತ, ಅಳಂದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್​ ಅವರನ್ನು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಅಲ್ಲದೆ ಬಿಆರ್ ಪಾಟೀಲ್ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿದೆ.

ರಾಜ್ಯ ಸರ್ಕಾರದ ಆದೇಶದಂತೆ ಆಳಂದ ಶಾಸಕ ಬಿ ಆರ್ ಪಾಟೀಲ್ ಅವರನ್ನು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಉಪಾಧ್ಯಕ್ಷರಾಗಿ ನೇಮಕ ಮಾಡುವುದರ ಜೊತೆಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಮತ್ತು ಎಲ್ಲಾ ಸೌಲಭ್ಯಗಳೊಂದಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಸೂಚಿಸಿದೆ.

ಫೆಬ್ರವರಿ 1 ರಂದು ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ನಾನು ರಾಜೀನಾಮೆ ನೀಡಿದ್ದೇನೆ. ರಾಜೀನಾಮೆ ಪತ್ರವನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಈಗಾಗಲೇ ತಲುಪಿಸಿದ್ದೇನೆ ಎಂದು ಬಿಆರ್ ಪಾಟೀಲ್ ಅವರು ಮಾಧ್ಯಮಕ್ಕೆ ತಿಳಿಸಿದ್ದರು.

ಆದರೆ ರಾಜೀನಾಮೆ ನೀಡಿರುವ ಉದ್ದೇಶವನ್ನು ಮಾತ್ರ ಬಿಟ್ಟುಕೊಟ್ಟಿಲ್ಲ.ಆದರೆ ಬಿಆರ್ ಪಾಟೀಲ್ ಅವರ ರಾಜೀನಾಮೆ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿತ್ತು. 
<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments