Webdunia - Bharat's app for daily news and videos

Install App

ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟ ಬ್ರಹ್ಮಚಾರಿಗಳು

Webdunia
ಶುಕ್ರವಾರ, 24 ಫೆಬ್ರವರಿ 2023 (14:54 IST)
ವಯಸ್ಸು ಏರುತ್ತಿದೆ ಆದರೆ ಮದುವೆಗೆ ಯಾರೂ ಹೆಣ್ಣು ಕೊಡುತ್ತಿಲ್ಲವೆಂದು ರೊಚ್ಚಿಗೆದ್ದ ಕೆಲ ಬ್ರಹ್ಮಚಾರಿ ಯುವಕರು ಮದುವೆಯಾಗಲೆಂದು ಹರಕೆ ಹೊತ್ತು ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದು ಈ ಪಾದಯಾತ್ರೆಗೆ ಸ್ಯಾಂಡಲ್​ವುಡ್​ನ ಡಾಲಿ ಧನಂಜಯ್ ಚಾಲನೆ ನೀಡಿದ್ದಾರೆ. ಮಂಡ್ಯ ಜಿಲ್ಲೆ ಕೆ.ಎಂ.ದೊಡ್ಡಿ ಗ್ರಾಮದ ವೆಂಕಟೇಶ್ವರಸ್ವಾಮಿ ದೇವಾಲಯದಿಂದ ಸುಮಾರು ಇಪ್ಪತ್ತಕ್ಕೂ ಹೆಚ್ಚು ಮಂದಿ ಯುವಕರು ಪಾದಯಾತ್ರೆ ಆರಂಭಿಸಿದ್ದಾರೆ. ಈ ಪಾದಯಾತ್ರೆಗೆ ಚಾಲನೆ ನೀಡಿರುವ ಡಾಲಿ ಧನಂಜಯ್ ಕೆಲ ದೂರ ಅವಿವಾಹಿತ ಯುವಕರೊಂದಿಗೆ ತಾವೂ ಹೆಜ್ಜೆ ಹಾಕಿದರು. ಬ್ರಹ್ಮಚಾರಿಗಳ ನೋವು ಆಲಿಸಿದ ಡಾಲಿ ಧನಂಜಯ್ ಪಾಲ್ಗೊಂಡಿರುವ ಎಲ್ಲ ಬ್ರಹ್ಮಚಾರಿಗಳು ಮುಂದಿನ ವರ್ಷದ ವೇಳೆಗೆ ಗೃಹಸ್ಥರಾಗಲಿ ಎಂದು ಹಾರೈಸಿ, ಬಡವರ ಮಕ್ಳು ಬೆಳೀಬೇಕು, ರೈತರ ಮಕ್ಳಿಗೆ ಹೆಣ್ಣು ಸಿಗ್ಬೇಕು ಎಂದ್ರು ಡಾಲಿ. ಈ ಪಾದಯಾತ್ರೆಯಲ್ಲಿ ಕೆ.ಎಂ.ದೊಡ್ಡಿ ಗ್ರಾಮದ ಅವಿವಾಹಿತರು ಮಾತ್ರವೇ ಅಲ್ಲದೆ ಇನ್ನೂ ಕೆಲವು ಗ್ರಾಮಗಳ ಅವಿವಾಹಿತ ಯುವಕರು ಹಾಗೂ ಹೊರ ರಾಜ್ಯದ ಇಬ್ಬರು ಯುವಕರು ಸಹ ಭಾಗವಹಿಸಿದ್ದು ವಿಶೇಷ. ಪಾದಯಾತ್ರೆ ತಂಡದಲ್ಲಿರುವ ಬಹುತೇಕರು ರೈತರ ಮಕ್ಕಳು, ಸ್ವತಃ ಯುವ ರೈತರೇ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments