ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ

Webdunia
ಮಂಗಳವಾರ, 3 ಆಗಸ್ಟ್ 2021 (20:19 IST)
ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಆಗಸ್ಟ್ 23ರಂದು ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಹೇಳಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರೋ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ‘ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸುಧಾರಣೆಯಲ್ಲಿ ನಾರಾಯ ಗುರುಗಳ ಚಿಂತನೆಯ ಪಾತ್ರ’ ಎಂಬ ವಿಷಯದಲ್ಲಿ ಜಿಲ್ಲಾ ಹಾಗೂ 16 ಬ್ಲಾಕ್ ಮಟ್ಟದಲ್ಲಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
8 ನೇ ತರಗತಿಯಿಂದ ಪಿಯುಸಿ, ದ್ವಿತೀಯ ಪಿಯುಸಿಯಿಂದ ಪದವೀಧರ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಾಗೂ ಮುಕ್ತ ವಿಭಾಗ ಸೇರಿ ಮೂರು ವಿಭಾಗಗಳಲ್ಲಿ ಸ್ಪರ್ಧೆ ನಡೆಯಿದೆ ಎಂದರು. ಜಿಲ್ಲಾ ಹಾಗೂ ಪ್ರತಿ ಬ್ಲಾಕ್ ಮಟ್ಟದಲ್ಲಿಯೂ ಪ್ರತ್ಯೇಕವಾಗಿ ಪ್ರಥಮ ಹಾಗೂ ದ್ವಿತೀಯ ವಿಜೇತರಿಗೆ ನಗದು ಬಹುಮಾನದೊಂದಿಗೆ ಕಾರ್ಯಕ್ರಮದಂದು ರಾಷ್ಟ್ರ ಮಟ್ಟದ ನಾಯಕರ ಸಮ್ಮುಖದಲ್ಲಿ ಬಹುಮಾನ ವಿತರಿಸಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವವರಿಗೆ ಸಂಬಂಧಿಸಿದ ಪುಸ್ತಕವನ್ನೂ ನೀಡಲಾಗುವುದು.ಪ್ರಬಂಧವು 500ರಿಂದ 600 ಪದಗಳಿಗೆ ಸೀಮಿತವಾಗಿರಬೇಕು ಎಂದು ಅವರು ಹೇಳಿದರು. ನಾರಾಯಣ ಗುರುಗಳ ಚಿಂತನೆಯಿಂದ ಪ್ರಭಾವಿತನಾಗಿ ತಾನು ಈ ಮಟ್ಟಕ್ಕೆ ಬೆಳೆದಿದ್ದು, ಅವರ ಜಯಂತಿ ಆಚರಣೆಯ ಮೂಲಕ ಯುವ ಪೀಳಿಗೆಗೆ ಅವರ ಆದರ್ಶಗಳನ್ನು ತಲುಪಿಸುವ ಉದ್ದೇಶದಿಂದ ವಿಜೃಂಭಣೆಯಿಂದ ಸಮಾರಂಭವನ್ನು ನಡೆಸಲು ತೀರ್ಮಾನಿಸಲಾಗಿದೆ ಅಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬನ್ನೇರುಘಟ್ಟದಲ್ಲಿ ಪ್ರವಾಸೀ ಮಹಿಳೆಯ ಮೇಲೆ ಚೀತಾ ದಾಳಿ: ಭಯಾನಕ ವಿಡಿಯೋ ಇಲ್ಲಿದೆ

Bihar election result 2025: ಲಾಲೂ ಪ್ರಸಾದ್ ಯಾದವ್ ಇಬ್ಬರು ಪುತ್ರರ ಕತೆ ಏನಾಗಿದೆ ನೋಡಿ

ಅಯ್ಯೋ ಪಾಪ ಎಂದು ಟರ್ಕಿಗೆ ಸಹಾಯ ಮಾಡಿತ್ತು ಭಾರತ: ಆದರೆ ಈಗ ಟರ್ಕಿ ಮಾಡುತ್ತಿರೋದು ಏನು

Karnataka Weather: ಈ ಜಿಲ್ಲೆಗೆ ಮಾತ್ರ ಇಂದು ಮಳೆಯ ಸೂಚನೆ

Bihar election result 2025: ಬಿಹಾರದಲ್ಲಿ ಯಾರಿಗೆ ಆರಂಭಿಕ ಮುನ್ನಡೆ

ಮುಂದಿನ ಸುದ್ದಿ
Show comments