Webdunia - Bharat's app for daily news and videos

Install App

ಬಿಪಿಎಲ್ ಪಡಿತರ ಮೇಲಿನ ಕ್ರಮಕ್ಕೆ ಬ್ರೇಕ್!

Webdunia
ಗುರುವಾರ, 25 ಆಗಸ್ಟ್ 2022 (11:40 IST)
ಬೆಂಗಳೂರು : ನಾಲ್ಕು ಚಕ್ರದ ಸ್ವಂತ ವಾಹನ ಹೊಂದಿದವರ ಅಂತ್ಯೋದಯ, ಬಿಪಿಎಲ್ ಕಾರ್ಡ್ಗಳನ್ನು ಎಪಿಎಲ್ ಕಾರ್ಡ್ಗಳಾಗಿ ಪರಿವರ್ತಿಸುವ ಪ್ರಕ್ರಿಯೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬ್ರೇಕ್ ನೀಡಿದೆ.
 
ಅಂತ್ಯೋದಯ, ಬಿಪಿಎಲ್ ಪಡಿತರ ಚೀಟಿಯನ್ನು ಅಕ್ರಮವಾಗಿ ಪಡೆದು ಬಡವರ ʼಅನ್ನಭಾಗ್ಯʼಕ್ಕೆ ಕನ್ನ ಹಾಕಿದವರನ್ನು ಪತ್ತೆ ಹಚ್ಚುವ ಕಾರ್ಯಾಚರಣೆಯನ್ನು ಆಹಾರ ಇಲಾಖೆ ಆರಂಭಿಸಿತ್ತು. ಅನರ್ಹ ಪಡಿತರ ಚೀಟಿಗಳನ್ನು ಎಪಿಎಲ್ಗೆ ಪರಿವರ್ತಿಸುವ ಪ್ರಕ್ರಿಯೆ ನಡೆಸಿತ್ತು. 

ಆದಾಯ ತೆರಿಗೆ ಪಾವತಿದಾರರು, ಸರ್ಕಾರಿ ನೌಕರರು, 3 ಹೆಕ್ಟೇರ್ಗಿಂತ ಹೆಚ್ಚು ಜಮೀನು ಹೊಂದಿದವರು, 1.20 ಲಕ್ಷಕ್ಕಿಂತ ಹೆಚ್ಚು ವಾರ್ಷಿಕ ಆದಾಯ ಹೊಂದಿದವರು ಮತ್ತು ನಾಲ್ಕು ಚಕ್ರದ ವೈಯಕ್ತಿಕ ವಾಹನ ಇರುವವರು ಅಂತ್ಯೋದಯ ಅಥವಾ ಬಿಪಿಎಲ್ ಪಡಿತರ ಚೀಟಿ ಪಡೆಯಲು ಅರ್ಹರಲ್ಲ ಎಂದು ಇಲಾಖೆ ಪಟ್ಟಿ ಮಾಡಿತ್ತು.

ಈ ಸಂಬಂಧ ಕ್ರಮ ಕೈಗೊಳ್ಳಲು ಎಲ್ಲ ಡಿಸಿಗಳು ಮತ್ತು ಇಲಾಖೆ ಜಂಟಿ/ಉಪನಿರ್ದೇಶಕರಿಗೂ ಈ ಹಿಂದೆ ಆಹಾರ ಇಲಾಖೆ ಸೂಚನೆ ನೀಡಿತ್ತು. ಆದರೆ ನಾಲ್ಕು ಚಕ್ರದ ಸ್ವಂತ ವಾಹನ ಹೊಂದಿದವರನ್ನು ಅನರ್ಹ ಪಟ್ಟಿಗೆ ಸೇರಿಸಿರುವುದಕ್ಕೆ ಸರ್ಕಾರ ಹಾಗೂ ಪಕ್ಷದವರಲ್ಲೇ ತೀವ್ರ ಆಕ್ಷೇಪ ವ್ಯಕ್ತವಾಗಿತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments