ಹೊಸ ವರ್ಷಕ್ಕೆ ಬ್ರೇಕ್ ಬೀಳುವ ಸಾಧ್ಯತೆ..!

Webdunia
ಬುಧವಾರ, 8 ಡಿಸೆಂಬರ್ 2021 (19:59 IST)
ನಗರದಲ್ಲಿ ಕೊರೊನಾ ಒಂದು ಕಡೆಯಾದ್ರೆ ಮತ್ತೊಂದು ಕಡೆ ಒಮಿಕ್ರಾನ್ ಭೀತಿ ಹೆಚ್ಚಾಗಿದೆ. ಹೀಗಾಗಿ ಹೊಸ ವರ್ಷ ಹಾಗೂ ಕ್ರಿಸ್ ಮಸ್ ಆಚರಣೆಗೆ ಅವಕಾಶ ಕೊಡಬೇಕೋ ಬೇಡ್ವೋ ಅನ್ನೋ ಚರ್ಚೆ ಆರಂಭವಾಗಿದೆ. ಈ ವಿಚಾರವಾಗಿ ಇಂದು ಮಾತನಾಡಿದ ಡಿ.ಸಿ.ಮಂಜುನಾಥ್, ಹೊಸ ವರ್ಷ, ಕ್ರಿಸ್ ಮಸ್ ಬಗ್ಗೆ ತಾಂತ್ರಿಕ ಸಲಹಾ  ಸಮಿತಿ ಡಿಸೈಡ್ ಮಾಡಿ ಸರ್ಕಾರಕ್ಕೆ ಹೇಳಲಿದ್ದಾರೆ. ಸಿಎಂ ನೀಡಿದ ಆದೇಶ ನಾವು ಪಾಲನೆ ಮಾಡ್ತೇವೆ. ಆದರೆ ನಾನು ಮನವಿ ಮಾಡ್ತೀನಿ. ಜನರು ಮನೆಯಲ್ಲಿ ಹೊಸ ವರ್ಷ ಆಚರಣೆ ಮಾಡಬೇಕು. ಗುಂಪು ಗುಂಪಾಗಿ ಸೇರಬಾರದು ಎಂದರು. ಕೊರೊನಾ ಕುರಿತಂತೆ ಮಾತನಾಡಿದ ಅವರು ಬಿಬಿಎಂಪಿಯ ಮುಖ್ಯ ಆಯುಕ್ತ ನೇತೃತ್ವದಲ್ಲಿ ಕೆಲವು ಕ್ರಮಗಳು ತೆಗೆದುಗೊಂಡಿವೆ. ಟೆಸ್ಟ್ಂಗ್ ಸಂಖ್ಯೆ ಹೆಚ್ಚಳ ಮಾಡಿದ್ದೇವೆ. ಕೆಲವೊಂದು ಕ್ಲಸ್ಟರ್ ಆಗಿವೆ.  ಬೋರ್ಡಿಂಗ್ ಸ್ಕೂಲ್, ಹಾಸ್ಟೆಲ್, ಶಾಲೆಗಳಲ್ಲಿ ಟೆಸ್ಟಿಂಗ್ ಹೆಚ್ಚಳ ಮಾಡಿದ್ದೇವೆ ಎಂದರು. ಬೆಂಗಳೂರು ಹೊರಗಿನ ಪ್ರದೇಶದಲ್ಲಿ ಕಟ್ಟು ನಿಟ್ಟಿನ ಕ್ರಮ ವಹಿಸಲಾಗಿದೆ. ಶಾಲೆಗಳಲ್ಲಿ ಕ್ಲಸ್ಟರ್ ಕೇಸ್ ಗಳು ಪತ್ತೆಯಾಗಿವೆ. ಒಂದು ಶಾಲೆಯಲ್ಲಿ ಒಬ್ಬ ವಿದ್ಯಾರ್ಥಿಗೆ ಬಂದಿತ್ತು. ನಂತರ ಇಡೀ ಶಾಲೆಯಲ್ಲಿ ಇರುವವರಿಗೆ ಎಲ್ಲರಿಗೂ ಟೆಸ್ಟ್ ಮಾಡಲಾಗಿದೆ. ಇದರಲ್ಲಿ ಕೆಲವರಿಗೆ ಪಾಸಿಟಿವ್ ಆಗಿತ್ತು. ಅವರನ್ನು ಐಸೋಲೇಟ್ ಮಾಡಿ ಚಿಕಿತ್ಸೆ ನೀಡಿದ್ದೇವೆ. ಸ್ಪೂರ್ತಿ ನರ್ಸಿಂಗ್ ಹೋಂ ನಲ್ಲಿ ಒಬ್ಬರಿಗೆ ಪಾಸಿಟಿವ್ ಬಂದಿತ್ತು. ಆ ನರ್ಸಿಂಗ್ ಹೋಂ ನ 500 ಜನರಿಗೆ ಟೆಸ್ಟ್ ಮಾಡಲಾಯಿತು. ಇದರಲ್ಲಿ 12 ಜನರಿಗೆ ಪಾಸಿಟಿವ್ ಬಂದಿದೆ. ಐಸೋಲೇಷನ್ ಮಾಡಲಾಗಿದೆ. ಸುಮಾರು 50 ಜನರ ಸ್ವಾಬ್ ಅನ್ನು ಜಿನೋಮ್ ಸೀಕ್ವೆನ್ಸ್ ಗೆ ಕಳುಹಿಸಲಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಒಬ್ಬರು ಜಗತನ್ನು, ಇನ್ನೊಬ್ಬರು ದೇಶವನ್ನು ನಾಶ ಮಾಡುತ್ತಿದ್ದಾರೆ: ಟ್ರಂಪ್, ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಗರಂ

108 ಆಂಬುಲೆನ್ಸ್ ಸೇವೆ ಇನ್ಮುಂದೆ ಸರ್ಕಾರದ ಸುಪರ್ದಿಗೆ: ದಿನೇಶ್ ಗುಂಡೂರಾವ್

ಮುಂದಿನ ಸುದ್ದಿ
Show comments