Select Your Language

Notifications

webdunia
webdunia
webdunia
webdunia

ಬ್ರೇಕಿಂಗ್‌ ನ್ಯೂಸ್: ಇನ್ನು ಕೆಲವೇ ಗಂಟೆಗಳಲ್ಲಿ ಪ್ರದೀಪ್ ಈಶ್ವರ್ ರಾಜೀನಾಮೆ

pradeep eshwar

sampriya

ಬೆಂಗಳೂರು , ಮಂಗಳವಾರ, 4 ಜೂನ್ 2024 (18:03 IST)
Photo By X
ಬೆಂಗಳೂರು:  ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ಧ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಒಂದು ವೋಟ್‌ನಲ್ಲಿ ಗೆದ್ದಲ್ಲಿ ರಾಜೀನಾಮೆ ನೀಡುವ ಸವಾಲೆಸೆದ ಪ್ರದೀಪ್‌ ಈಶ್ವರ್‌ಗೆ ಹೊಸ ಸಂಕಷ್ಟ ಎದುರಾಗಿದೆ.

ಲೋಕಸಭಾ ಚುನಾವಣೆಯ ಮತಎಣಿಕೆ ಪೈನಲ್‌ ಹಂತದಲ್ಲಿದ್ದು, ಈ ನಡುವೆ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಅವರ ರಾಜೀನಾಮೆಗೆ ಒತ್ತಾಯ ಜೋರಾಗಿದೆ.

 ಇದೀಗ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಪ್ರದೀಪ್‌ ಈಶ್ವರ್‌ ಸವಾಲೆಸೆಯುವ  ವಿಡಿಯೋವನ್ನು ಹಂಚಿಕೊಂಡು, ಬ್ರೇಕಿಂಗ್‌ ನ್ಯೂಸ್‌, ಇನ್ನು ಕೆಲವೇ ಗಂಟೆಗಳಲ್ಲಿ ಪ್ರದೀಪ್‌ ಈಶ್ವರ್‌ ರಾಜೀನಾಮೆ ಎಂದು ಬರೆದುಕೊಂಡಿದ್ದಾರೆ.

ಈ ಹಿಂದೆ ಮಾಧ್ಯಮಗಳ ಮುಂದೆ ಪ್ರದೀಪ್‌ ಈಶ್ವರ್‌ ಮಾತನಾಡುವಾಗ ಕಾಂಗ್ರೆಸ್‌ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ಧ ಬಿಜೆಪಿ ಜೆಡಿಎಸ್‌ ಅಭ್ಯರ್ಥಿ ಡಾ.ಕೆ.ಸುಧಾರಕ್‌ ಒಂದು ವೋಟ್‌ ಜಾಸ್ತಿ ಪಡೆದರೆ ಕೂಡಲೇ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು.

ಸದ್ಯ ಚಿಕ್ಕಬಳ್ಳಾಪುರದಲ್ಲಿ ಸುಧಾಕರ್ ಅವರು ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ವಿರುದ್ಧ ಗೆಲುವು ಸಾಧಿಸಿದ್ದಾರೆ.  ಈ ಹಿನ್ನೆಲೆಯಲ್ಲಿ ಪ್ರದೀಪ್ ಈಶ್ವರ್ ರಾಜೀನಾಮೆ ನೀಡುವಂತೆ ಬಿಜೆಪಿ ಕಾರ್ಯಕರ್ತರು ಆಗ್ರಹಿಸುತ್ತಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ನೂತನ ಸಂಸದ ಡಾ.ಮಂಜುನಾಥ್‌ಗೆ ಒಳ್ಳೆಯದಾಗಲಿ ಎಂದು ಶುಭಕೋರಿದ ಡಿಕೆ ಸುರೇಶ್