Webdunia - Bharat's app for daily news and videos

Install App

ಈ ರೋಗಕ್ಕೆ ಬೆಂಡಾದ ಅಡಿಕೆ ಬೆಳೆಗಾರರು

Webdunia
ಶನಿವಾರ, 5 ಅಕ್ಟೋಬರ್ 2019 (20:07 IST)
ರಾಜ್ಯದ ಕರಾವಳಿಯಲ್ಲಿ ಈ ಬಾರಿ ಅತಿವೃಷ್ಠಿಯಿಂದಾಗಿ ಅಡಿಕೆ ಬೆಳೆಗೆ  ಕೊಳೆ ರೋಗ ಬಂದಿದೆ. ಅಡಿಕೆ ಬೆಳೆಗಾರರು ಆತಂಕದಲ್ಲಿದ್ದಾರೆ. ರೈತರ ನೆರವಿಗೆ ರಾಜ್ಯ ಹಾಗೂ ಕೇಂದ್ರ ಸರಕಾರ ಧಾವಿಸುತ್ತಾ ಎಂಬುದನ್ನು  ಬೆಳೆಗಾರರು ಕಾಯುವಂತಾಗಿದೆ.

ರಾಜ್ಯದ ಕರಾವಳಿಯಲ್ಲಿ ಈ ಬಾರಿ ಮುಂಗಾರು ಮಳೆ ತೀವ್ರಗೊಂಡಿತ್ತು. ಆಗಸ್ಟ್ ಹಾಗೂ ಸೆಪ್ಟಂಬರ್ ನಲ್ಲಿ ಸುರಿದ ಮಳೆಗೆ ಅಡಿಕೆ ಮರಕ್ಕೆ ಕೊಳೆ ರೋಗ ತಗುಲಿದೆ. ಇದರಿಂದಾಗಿ ಅಡಿಕೆ ಬೆಳೆಗಾರರಿಗೆ ಭಾರೀ ನಷ್ಟ ಉಂಟಾಗಿದೆ.  ಕರಾವಳಿಯಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಮಂದಿ ಅಡಿಕೆ ಬೆಳೆಗಾರರು ಇದ್ದಾರೆ. ಅಡಿಕೆ ಬೆಳೆ ನಂಬಿ ಅವರು ಜೀವನ ಮಾಡುತ್ತಿದ್ದಾರೆ. ಕಳೆದ ವರ್ಷವೂ ಭಾರೀ ಮಳೆಯಾದ  ಕಾರಣ ಅಡಿಕೆ ಬೆಳೆಗೆ ಕೊಳೆ ರೋಗ ಬಂದಿತ್ತು.  

ಆಗಲೂ ರೈತರಿಗೆ ಭಾರೀ ನಷ್ಟವುಂಟಾಗಿತ್ತು. ಲಕ್ಷಾಂತರ ಮಂದಿ ಅಡಿಕೆ ಬೆಳೆಗಾರರು ಈಗಾಗಲೇ ಸಾಲ ಮಾಡಿ ಜೀವನ ನಡೆಸುತ್ತಿದ್ದಾರೆ. ಈ ಬಾರಿ ಅಡಿಕೆ ಬೆಳೆಗೆ ಕೊಳೆ ರೋಗ ತಗುಲಿರುವುದರಿಂದ ರೈತರು ಮತ್ತಷ್ಟು ಆತಂಕಕ್ಕೆ ಸಿಲುಕಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೈತರ ನೆರವಾಗಿ ಧಾವಿಸುತ್ತವೆಯೇ ಅಂತ ಬೆಳೆಗಾರರು ಕಾಯುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments