Select Your Language

Notifications

webdunia
webdunia
webdunia
webdunia

ಲಂಚ : ಇಬ್ಬರು ಕಾನ್ಸ್ಟೇಬಲ್ ಕೆಲಸದಿಂದ ವಜಾ

ಲಂಚ : ಇಬ್ಬರು ಕಾನ್ಸ್ಟೇಬಲ್ ಕೆಲಸದಿಂದ ವಜಾ
ಬೆಂಗಳೂರು , ಗುರುವಾರ, 16 ಮಾರ್ಚ್ 2023 (15:09 IST)
ಬೆಂಗಳೂರು : ಪೊಲೀಸರಿಂದ ಸಾರ್ವಜನಿಕರ ಸುಲಿಗೆ ಪ್ರಕರಣದಲ್ಲಿ ಇಬ್ಬರು ಕಾನ್ಸ್ಟೇಬಲ್ಗಳನ್ನು ಸೇವೆಯಿಂದ ವಜಾ ಮಾಡಿ ಕಮಿಷನರ್ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
 
ಆಡುಗೋಡಿ ಠಾಣೆ ಕಾನ್ಸ್ಟೇಬಲ್ ಅರವಿಂದ್ ಹಾಗೂ ಮಾಳಪ್ಪ ಬಿ.ವಾಲಿಕಾರ್ ಲಂಚಕ್ಕೆ ಬೇಡಿಕೆ ಇಟ್ಟು ಸೇವೆಯಿಂದ ವಜಾಗೊಂಡವರು. ಚೈತ್ರ ರತ್ನಾಕರ್ ಹಾಗೂ ಚೀರಾಸ್ ಎಂಬುವವರು ಕೋರಮಂಗಲದ ನೆಕ್ಸಾಸ್ ಮಾಲ್ ಬಳಿ ಸಿಗರೇಟ್ ಸೇದುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದಿದ್ದ ಕಾನ್ಸ್ಟೇಬಲ್ಗಳು  50 ಸಾವಿರ ರೂ. ದಂಡ ಹಾಗೂ ಎಫ್ಐಆರ್ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು.

ಈ ಬಗ್ಗೆ ಚೈತ್ರ ರತ್ನಾಕರ್ ಹಾಗೂ ಚೀರಾಸ್ ಟ್ವಿಟ್ಟರ್ನಲ್ಲಿ ಡಿಜಿ ಹಾಗೂ ಐಜಿಪಿಗೆ ದೂರು ನೀಡಿದ್ದರು. ಡಿಸಿಪಿ ಮಡಿವಾಳ ಅವರು ಎಸಿಪಿ ತನಿಖೆಗೆ ಆದೇಶಿಸಿದ್ದರು. ಲಂಚ ಪಡೆದಿರುವುದು ವಿಚಾರಣೆ ವೇಳೆ ಸಾಭೀತಾದ ಹಿನ್ನೆಲೆಯಲ್ಲಿ ಸೇವೆಯಿಂದ ವಜಾಗೊಳಿಸಿ ಆದೇಶಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಇತಿಹಾಸ ಪ್ರಸಿದ್ದ ಕರಗಕ್ಕೆ ದಿನಗಣನೆ