Webdunia - Bharat's app for daily news and videos

Install App

ತಾಳಿ ಕಟ್ಟೋ ಕೊನೆ ಘಳಿಗೆಯಲ್ಲಿ ವಧುವಿನ ಹೈಡ್ರಾಮಾ!

Webdunia
ಬುಧವಾರ, 25 ಮೇ 2022 (14:52 IST)
ಚಿಕ್ಕಬಳ್ಳಾಪುರ : ಮೊನ್ನೆ ಮೊನ್ನೆಯಷ್ಟೇ ಮೈಸೂರಿನಲ್ಲಿ ತಾಳಿ ಕಟ್ಟೋ ಕೊನೆ ಘಳಿಗೆಯಲ್ಲಿ ವಧು ತಲೆ ಸುತ್ತಿ ಬಿದ್ದು ನಾಟಕ ಮಾಡುವ ಮೂಲಕ ಮದುವೆ ಮುರಿದಿದ್ದಳು.
 
ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಿದುರಾಶ್ವತ್ಥದಲ್ಲೂ ರಾತ್ರಿ ಆರತಕ್ಷತೆಯಲ್ಲಿ ಭಾಗಿಯಾದ ವಧು ರಾತ್ರೋ ರಾತ್ರಿ ಪ್ರಿಯಕರನ ಜೊತೆ ಎಸ್ಕೇಪ್ ಆಗಿದ್ದು, ಮದುವೆ ಮುರಿದುಬಿದ್ದಿದೆ.

ಹೌದು ಗೌರಿಬಿದನೂರು ನಾಗರೆಡ್ಡಿ ಬಡಾವಣೆಯ ವಧು ವೆನ್ನಲ ಹಾಗೂ ಕರೇಕಲ್ಲಹಳ್ಳಿಯ ವರ ಸುರೇಶ್ ಮದುವೆ ನಿಶ್ಚಯವಾಗಿತ್ತು. ಗುರು ಹಿರಿಯರ ನಿಶ್ಚಯಿಸಿದಂತೆ ವಿದುರಾಶ್ವತ್ಥ ಗ್ರಾಮದ ಚನ್ನರಾಯಸ್ವಾಮಿ ಕಲ್ಯಾಣಮಂಟಪದಲ್ಲಿ ರಾತ್ರಿ ಆರತಕ್ಷತೆಯೂ ನೇರವೇರಿತ್ತು. ಆದರೆ ರಾತ್ರೋರಾತ್ರಿ ವಧು ವೆನ್ನಲ ತನ್ನ ಪ್ರಿಯಕರ ಸೋದರ ಮಾವ ಪ್ರವೀಣ್ ಜೊತೆ ಎಸ್ಕೇಪ್ ಆಗಿದ್ದಾಳೆ. 

ಇದರಿಂದ ಇಂದು ನಡೆಯಬೇಕಿದ್ದ ಮದುವೆ ಮುರಿದುಬಿದ್ದಿದೆ. ಹೀಗಾಗಿ ಸಂಬಂಧಿಕರು ಗೌರಿಬಿದನೂರು ನಗರ ಪೊಲೀಸರ ಮೊರೆ ಹೋಗಿದ್ದು ವಧು ನಾಪತ್ತೆ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೇಸ್ ಬುಕ್ ನಲ್ಲಿ ಕನ್ನಡ ಅನುವಾದ ಎಡವಟ್ಟು: ಸಿಎಂ ಸಿದ್ದರಾಮಯ್ಯ ಕ್ಷಮೆ ಕೇಳಿದ ಮೆಟಾ

ನವಂಬರ್ ನಲ್ಲಿ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆ: ವಿಜಯೇಂದ್ರ ಸ್ಪೋಟಕ ಹೇಳಿಕೆ

ಬೈರತಿ ಬಸವರಾಜು ವಿರುದ್ಧ ಪೊಲೀಸರೇ ಹೆಸರು ಸೇರಿಸಿಕೊಂಡಿದ್ದಾರೆ: ಆರ್ ಅಶೋಕ್

Arecanut price: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿ ಬೆಲೆ ಇಳಿಮುಖದತ್ತ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments