Webdunia - Bharat's app for daily news and videos

Install App

ಬ್ರಿಗೇಡ್ ಕದನ : ಮತ್ತೆ ಶುರುವಾಯಿತು ಈಶ್ವರಪ್ಪ, ಯಡಿಯೂರಪ್ಪ ಜಟಾಪಟಿ

Webdunia
ಶನಿವಾರ, 26 ನವೆಂಬರ್ 2016 (14:02 IST)
ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನಲ್ಲಿ ಮುಂದುವರಿಯುವುದು ಬೇಡ ಎಂದು ಬಿಜೆಪಿ ಮುಖಂಡ ರಾಮಲಾಲ್ ಕಟ್ಟಪ್ಪಣೆ ಜಾರಿಗೊಳಿಸಿದ್ದರೂ, ಈಶ್ವರಪ್ಪ ಬ್ರಿಗೇಡ್‌ನಲ್ಲಿ ಮುಂದುವರಿದ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೈಕಮಾಂಡ್‌ ಮೊರೆಹೋಗಿದ್ದಾರೆ.
 
ರಾಜ್ಯ ಬಿಜೆಪಿ ಘಟಕದ ಮುಖಂಡರು ರಾಜ್ಯದಾದ್ಯಂತ ಪ್ರವಾಸ ಮಾಡಿ ಪಕ್ಷದ ಪರ ಒಲವನ್ನು ಹೆಚ್ಚಿಸಲು ಪ್ರಯತ್ನಿಸುತ್ತಿರುವ ಸಂದರ್ಭದಲ್ಲಿ, ಈಶ್ವರಪ್ಪ ಪಕ್ಷದ ಇಮೇಜ್‌ಗೆ ಧಕ್ಕೆ ತರುವಂತಹ ವರ್ತನೆ ತೋರುತ್ತಿದ್ದಾರೆ ಎಂದು ಯಡಿಯೂರಪ್ಪ ನೇರವಾಗಿ ಹೈಕಮಾಂಡ್‌ಗೆ ದೂರು ನೀಡಿದ್ದಾರೆ. 
 
ಬಿಜೆಪಿಯಲ್ಲಿಯೇ ಹಿಂದುಳಿದ ವರ್ಗಗಳ ಘಟಕಗಳಿದ್ದರೂ ಮತ್ತೊಂದು ಪ್ರತ್ಯೇಕ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕಟ್ಟು ಉದ್ದೇಶವೇನು ಎಂದು ಪ್ರಶ್ನಿಸಿದ ಅವರು, ಈಶ್ವರಪ್ಪ ಸ್ವೇಚ್ಚಾಚಾರದ ವರ್ತನೆ ಪಕ್ಷಕ್ಕೆ ಮುಳುವಾಗಬಹುದು ಎಂದು ಯಡಿಯೂರಪ್ಪ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಎದುರು ಆತಂಕ ವ್ಯಕ್ತಪಡಿಸಿದ್ದಾರೆ.
 
ಈಶ್ವರಪ್ಪ ಅವರನ್ನು ಕರೆಸಿ ಎದುರಾಗಿರುವ ಸಮಸ್ಯೆಗಳನ್ನು ಇತ್ಯರ್ಥಗೊಳಿಸುವುದಾಗಿ ಅಮಿತ್ ಶಾ ಭರವಸೆ ನೀಡಿದ್ದಾರೆ ಎಂದು ಯಡಿಯೂರಪ್ಪ ಬಣದ ಮೂಲಗಳು ತಿಳಿಸಿವೆ.
 
ಬಿಜೆಪಿ ಕಾರ್ಯದರ್ಶಿ ರಾಮಲಾಲ್ ಮತ್ತು ಆರೆಸ್ಸೆಸ್ ಮುಖಂಡರ ಸೂಚನೆಗಳಿಗೆ ಕ್ಯಾರೆ ಎನ್ನದ ಕೆ.ಎಸ್.ಈಶ್ವರಪ್ಪ, ತಮ್ಮ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ಗೆ ಯಡಿಯೂರಪ್ಪ ಸೇರಿದಂತೆ ಬಿಜೆಪಿ ಹೈಕಮಾಂಡ್ ಬೆಂಬಲ ಸೂಚಿಸಿದೆ ಎಂದು ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಸರಲ್ಲಿ ಕಲ್ಲು ಹುಡುಕುವ ಕಾಂಗ್ರೆಸ್ ಪಕ್ಷ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

Bengaluru: ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆ ಅರೆಸ್ಟ್‌

Shashi Tharoor: ಮೋದಿಯನ್ನು ಹೊಗಳಿದ ಕೈ ಸಂಸದ ಶಶಿ ತರೂರ್ ಗೆ ಸಿಕ್ತು ಭರ್ಜರಿ ಬಹುಮಾನ

ಪಾಕಿಸ್ತಾನದೊಂದಿಗೆ ಯುದ್ಧ ಬೇಡ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಹೇಳೋದೇ ಬೇರೆ

ಆಪರೇಷನ್ ಸಿಂಧೂರ್ ಬಗ್ಗೆ ಅಪಪ್ರಚಾರ ಮಾಡಲು ಕಾಂಗ್ರೆಸ್ ನಾಯಕರಿಗೆ ಟಾಸ್ಕ್

ಮುಂದಿನ ಸುದ್ದಿ
Show comments