ವೆಂಕಟೇಶ್ ಮೂರ್ತಿಗೆ ಕೊಟ್ಟಿದ್ದು ಅಮಾನತು ನೋಟಿಸ್ ಅಲ್ಲ, ಲವ್ ಲೇಟರ್ ಎಂದು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮುಖಂಡ ಮುಕುಡಪ್ಪ ವ್ಯಂಗ್ಯವಾಡಿದ್ದಾರೆ.
ರಾಯಣ್ಣ ಬ್ರಿಗೇಡ್ ಸಭೆಯಲ್ಲಿ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕರ್ನಾಟಕದಲ್ಲಿ ಇತಿಹಾಸ ಸೃಷ್ಟಿಸುವ ಸಂಸ್ಥೆಯಾಗಲಿದೆ. ನಮ್ಮನ್ನು ಟೀಕಿಸಿ. ಆದರೆ, ನಿರ್ಲಕ್ಷಿಸಬೇಡಿ ಎಂದು ಬಿಜೆಪಿ ನಾಯಕರಿಗೆ ಖಡಕ್ ಸಂದೇಶ ರವಾನಿಸಿದ್ದಾರೆ.
ಮಾಜಿ ಮೇಯರ್ ವೆಂಕಟೇಶ ಮೂರ್ತಿ ಅವರಿಗೆ ನೀಡಿದ್ದು ಅಮಾನತು ನೋಟಿಸ್ ನೀಡಿಲ್ಲ. ಅವರಿಗೆ ನೀಡಿದ್ದು ಲವ್ ಲೇಟರ್. ಈ ಮೂಲಕ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ನ ಸಕ್ರಿಯ ಕಾರ್ಯಕರ್ತರಾಗಲು ಅವಕಾಶ ನೀಡಿದ್ದಾರೆ ಎಂದರು.
ಸಂಗೊಳ್ಳಿ ರಾಯಣ್ಣ ಬ್ರಿಗೇಡ್ನಲ್ಲಿ ಗುರುತಿಸಿಕೊಂಡ ಹಿನ್ನೆಲೆಯಲ್ಲಿ ರಾಯಣ್ಣ ಬ್ರಿಗೇಡ್ನ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಮೇಯರ್ ವೆಂಕಟೇಶ ಮೂರ್ತಿ ಅವರನ್ನು ಬಿಜೆಪಿ ಪಾಳಯದಿಂದ ಅಮಾನತು ಮಾಡಲಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ