Webdunia - Bharat's app for daily news and videos

Install App

15 ಸಚಿವರೇಕೆ, ಇಡೀ ಸಚಿವ ಸಂಪುಟವನ್ನೇ ಕರೆ ತನ್ನಿ: ಶ್ರೀನಿವಾಸ್ ಪ್ರಸಾದ್

Webdunia
ಶುಕ್ರವಾರ, 17 ಮಾರ್ಚ್ 2017 (12:24 IST)
ನಂಜನಗೂಡು ಉಪಚುನಾವಣೆಯಲ್ಲಿ 15 ಸಚಿವರೇಕೆ, ಇಡೀ ಸಚಿವ ಸಂಪುಟವನ್ನೇ ಕರೆ ತನ್ನಿ ಎಂದು ಮಾಜಿ ಸಚಿವ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್ ಸವಾಲ್ ಹಾಕಿದ್ದಾರೆ.
 
ನಂಜನಗೂಡು ಉಪಚುನಾವಣೆಯಲ್ಲಿ ಪ್ರತಿಯೊಂದು ಜಿಲ್ಲಾ ಪಂಚಾಯತಿ ಕ್ಷೇತ್ರಕ್ಕೆ ಒಬ್ಬೊಬ್ಬ ಸಚಿವರನ್ನು ನಿಯುಕ್ತಿಗೊಳಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ನೀಡಿದ ಹೇಳಿಕೆಗೆ  ಪ್ರಸಾದ್ ಪ್ರತಿಕ್ರಿಯೆ ನೀಡಿದ್ದಾರೆ.
 
ಸಿಎಂ ಸಿದ್ದರಾಮಯ್ಯ ತಮ್ಮ ಸಚಿವ ಸಂಪುಟವನ್ನು ನಂಜನಗೂಡಿಗೆ ಕರೆತಂದರೂ ನನ್ನ ಗೆಲುವು ಖಚಿತ. ನಂಜನಗೂಡಿನ ಜನತೆ ತುಂಬಾ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಅರ್ಧ ಸಾಲವನ್ನು ಮನ್ನಾ ಮಾಡಿ ಇನ್ನರ್ಧ ಸಾಲದ ಬಗ್ಗೆ ಕೇಂದ್ರ ಸರಕಾರದ ಮೊರೆಹೋಗಬೇಕಾಗಿತ್ತು. ಅದನ್ನು ಬಿಟ್ಟು ಕೇಂದ್ರ ಸರಕಾರ ಮನ್ನಾ ಮಾಡಿದರೆ ಮಾತ್ರ ನಾನು ಸಾಲ ಮನ್ನಾ ಮಾಡುತ್ತೇನೆ ಎನ್ನುವುದು ಸರಿಯಲ್ಲ ಎಂದು ಶ್ರೀನಿವಾಸ್ ಪ್ರಸಾದ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments