ಜನವರಿ 24ರಂದು ರಾಜ್ಯಾದ್ಯಂತ ಕೇಬಲ್ ಪ್ರಸಾರ ಸ್ಥಗಿತ

Webdunia
ಗುರುವಾರ, 17 ಜನವರಿ 2019 (13:17 IST)
ಬೆಂಗಳೂರು : ಭಾರತೀಯ ದೂರ ಸಂಪರ್ಕ  ನಿಯಂತ್ರಣ ಪ್ರಾಧಿಕಾರದ(ಟ್ರಾಯ್) ಹೊಸ ದರ ನಿಗದಿ ನಿಯಮವನ್ನು ಖಂಡಿಸಿ ಮತ್ತು ಕೇಬಲ್ ಆಪರೇಟರ್‌ ಗಳ ಉಳಿವಿಗಾಗಿ ಜನವರಿ 24ರಂದು ರಾಜ್ಯಾದ್ಯಂತ ಕೇಬಲ್ ಬಂದ್ ಆಗಲಿದ್ದು, ಅಂದು ಬೆಳಗ್ಗೆ 6 ರಿಂದ ರಾತ್ರಿ 10ರವರೆಗೆ ಕೇಬಲ್ ಪ್ರಸಾರ ಸ್ಥಗಿತಗೊಳ್ಳಲಿದೆ.

ಹೌದು. ರಾಜ್ಯ ಕೇಬಲ್ ಆಪರೇಟರ್ಸ್ ಅಸೋಸಿಯೇಷನ್‍ ಸಭೆ ನಡೆಸಿ ಒಮ್ಮತದಿಂದ  ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಈ ಬಗ್ಗೆ ಮಾತನಾಡಿದ ರಾಜ್ಯ ಕೇಬಲ್ ಅಸೋಸಿಯೇಷನ್ ಅಧ್ಯಕ್ಷರು, ‘ಟ್ರಾಯ್ ನ ಹೊಸ ನೀತಿಯಿಂದ ಗ್ರಾಹಕರಿಗೆ ಹೊರೆಯಾಗಲಿದೆ. ಕಡಿಮೆ ಚಾನೆಲ್ ನೋಡಿ ಸಾವಿರದ ತನಕ ಹಣ ಕಟ್ಟುವಂತೆ ಗ್ರಾಹಕರ ಮೇಲೆ ಹೊರೆ ಹೊರಿಸಲಾಗಿದೆ.


ಅಲ್ಲದೇ ಶೇ.18 ಜಿಎಸ್ ಟಿ ಸಹ ಗ್ರಾಹಕರ ಮೇಲೆ ಹೇರಲಾಗಿದೆ. ಅವರ ಮನೆಯಲ್ಲಿ ಕುಳಿತು ಟಿವಿ ನೋಡುವುದಕ್ಕೆ ತೆರಿಗೆ ಕಟ್ಟಬೇಕು’ ಎಂದು  ಹೇಳಿದ್ದಾರೆ.


 

ಅಲ್ಲದೇ 300 ರೂ.ಗೆ 400 ಕ್ಕೂ ಹೆಚ್ಚಿನ ಚಾನೆಲ್ ಗಳನ್ನು ಕೇಬಲ್ ಆಪರೇಟರ್ ಗಳು ನೀಡುತ್ತಿದ್ದಾರೆ. ಟ್ರಾಯ್ ಹೊಸ ನೀತಿಯಿಂದ ಗ್ರಾಹಕರು ಕೇಬಲ್ ಗಾಗಿ 1 ಸಾವಿರ ರೂ.ಗಿಂತಲೂ ಹೆಚ್ಚಿನ ಹಣವನ್ನು ಕಟ್ಟಬೇಕು. ಟ್ರಾಯ್ ಗ್ರಾಹಕ ವಿರೋಧಿ ಧೋರಣೆ ಖಂಡಿಸಿ ಪ್ರತಿಭಟನೆ ನಡೆಸುವ ಸಲುವಾಗಿ ವಾಹಿನಿಗಳ ಪ್ರಸಾರವನ್ನು ಸ್ಥಗಿತಗೊಳ್ಳಿಸುತ್ತೇವೆ ಎಂದು ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿದ್ದರಾಮಯ್ಯ ಅಂದು ರಾಯರ ಫೋಟೋ ತಿರಸ್ಕರಿಸಿದ್ರು, ಇಂದು ಗುರುವಾರವೇ ಪಟ್ಟ ಹೋಗ್ತಿದೆ: ನೆಟ್ಟಿಗರ ಚರ್ಚೆ Video

ಇಂದೇ ಮಧ್ಯಾಹ್ನ 3 ಗಂಟೆಗೆ ಸಿಎಂ ಹುದ್ದೆಗೆ ಸಿದ್ದರಾಮಯ್ಯ ರಾಜೀನಾಮೆ: ಕಣ್ಣೀರು ಹಾಕಿದ ಸಚಿವ ಸಂತೋಷ್‌ ಲಾಡ್‌

ಡಿ.ಕೆ. ಶಿವಕುಮಾರ್‌ಗೆ ಮುಖ್ಯಮಂತ್ರಿ ಪಟ್ಟ ಬಹುತೇಕ ಖಚಿತ: ಇದೇ ಮೇ 31ರಂದೇ ಪ್ರಮಾಣವಚನ ಸಾಧ್ಯತೆ

ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಯಾವುದೇ ಅಧಿಕೃತ ಮನವಿ ಸಲ್ಲಿಸಿಲ್ಲ: ಲೋಕಭವನ

ಮುಂದಿನ ಸುದ್ದಿ
Show comments