Publish Date: Wed, 16 Mar 2022 (18:48 IST)
Updated Date: Wed, 16 Mar 2022 (18:50 IST)
ನಂಜುಂಡೇಶ್ವರನ ದೇವಾಲಯದ ಬಳಿ ಮುಕ್ತಿ ಮಾರ್ಗದ ಸಮೀಪ ರಥ ಸ್ವಸ್ಥಾನ ಸೇರುವ ಸಂದರ್ಭದಲ್ಲಿ ಈ ಅಹಿತಕರ ಘಟನೆ ನಡೆದಿದೆ. ರಥ ಎಳೆಯುವ ಗುಂಪಿನಲ್ಲಿ ಸಿಲುಕಿ ಕಾಲು ಮುರಿತವಾಗಿದೆ ಎಂದು ಮೂಲಗಳು ತಿಳಿಸಿವೆ.
ನಂಜುಂಡೇಶ್ವರನ ದೇವಾಲಯದ ಬಳಿ ಮುಕ್ತಿ ಮಾರ್ಗದ ಸಮೀಪ ರಥ ಸ್ವಸ್ಥಾನ ಸೇರುವ ಸಂದರ್ಭದಲ್ಲಿ ಈ ಅಹಿತಕರ ಘಟನೆ ನಡೆದಿದೆ. ರಥ ಎಳೆಯುವ ಗುಂಪಿನಲ್ಲಿ ಸಿಲುಕಿ ಕಾಲು ಮುರಿತವಾಗಿದೆ ಎಂದು ಮೂಲಗಳು ತಿಳಿಸಿವೆ.
ಆನೇಕಲ್: ಬೆಂಗಳೂರು-ಕೃಷ್ಣಗಿರಿ ಹೆದ್ದಾರಿಯಲ್ಲಿ ದಂಪತಿ ಮೇಲೆ ಹರಿದ ಬಸ್, ಸ್ಥಳದಲ್ಲೇ ಮಹಿಳೆ ಸಾವು
ಬೈಕ್ ಮೇಲೆ ತೆರಳುತ್ತಿದ್ದ ದಂಪತಿ ಮೇಲೆ ಬಸ್ ಹರಿದು ಸ್ಥಳದಲ್ಲೇ ಮಹಿಳೆ ಮೃತಪಟ್ಟಿದ್ದರೆ, ಗಾಯಗೊಂಡ ಗಂಡನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರು – ಕೃಷ್ಣಗಿರಿ ಹೈವೆಯಲ್ಲಿ ಘಟನೆ ನಡೆದಿದೆ. ಸರ್ವೀಸ್ ರೋಡ್ ನಲ್ಲಿ ಚಲಿಸುತ್ತಿದ್ದ ಬೈಕ್ ಗೆ ತಮಿಳುನಾಡು ಸಾರಿಗೆ ಇಲಾಖೆ ಬಸ್ ಡಿಕ್ಕಿ ಹೊಡೆದಿದೆ. ಘಟನೆ ಬಳಿಕ ಬಸ್ ಚಾಲಕ ಪರಾರಿಯಾಗಿದ್ದಾನೆ. ಮಹಿಳೆಯ ಶವ ದಾರಿಯಲ್ಲಿಯೇ ಬಹಳ ಹೊತ್ತು ಇತ್ತು. ಅಂಬುಲೆನ್ಸ್ ಸರಿಯಾದ ಸಮಯಕ್ಕೆ ಬರಲಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೃಷ್ಣಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.