Webdunia - Bharat's app for daily news and videos

Install App

ನಿಗಮ ಸ್ಥಾನ ಮಕ್ಕಳ ಚಾಕಲೇಟ್ : ಬಿಎಸ್ ವೈಗೆ ಮುಖಭಂಗ – ಕಾಂಗ್ರೆಸ್ ನತ್ತ ಒಲವು

Webdunia
ಗುರುವಾರ, 10 ಅಕ್ಟೋಬರ್ 2019 (21:19 IST)
ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ಬಹುತೇಕ ಬಿಜೆಪಿ ರೆಬಲ್ ನಾಯಕರು ನಿರಾಕರಿಸಿದ್ದು, ಸಿಎಂ ಬಿ.ಎಸ್.ಯಡಿಯೂರಪ್ಪರಿಗೆ ಭಾರೀ ಮುಖಭಂಗಕ್ಕೆ ಕಾರಣವಾಗಿದೆ.

ನಿಗಮದ ಅಧ್ಯಕ್ಷ ಸ್ಥಾನವನ್ನು ನಿರಾಕರಿಸಿದ್ದಾರೆ ರಾಜು ಕಾಗೆ. ಬಿಜೆಪಿ ಸರ್ಕಾರ ನೀಡಿರುವ ನಿಗಮ ಸ್ಥಾನವನ್ನು ನಾನು ಸ್ವೀಕರಿಸಲ್ಲ. ರಾಜ್ಯದಲ್ಲಿ ಬಿಜೆಪಿ ಪಕ್ಷ ಆಡಳಿತದಲ್ಲಿದ್ದು, ಸರ್ಕಾರ ನನಗೆ ನೀಡಿರುವ ನಿಗಮ ಸ್ಥಾನ ಅಳುವ ಮಕ್ಕಳಿಗೆ ಚಾಕಲೇಟ್ ಕೊಟ್ಟಂತಾಗಿದೆ. ಇದನ್ನು ಯಾವುದೇ ಕಾರಣಕ್ಕೆ ಸ್ವೀಕರಿಸುವದಿಲ್ಲ.

ಬೇರೆಯವರನ್ನು ಪಕ್ಷಕ್ಕೆ ತಂದು ಅವರ ಪರ ಪ್ರಚಾರಕ್ಕಾಗಿ ನಾನು ಹೋಗಲ್ಲಾ. ಕಾರ್ಯಕರ್ತರೊಂದಿಗೆ ಇನ್ನೊಮ್ಮೆ ಚರ್ಚಿಸಿ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ನಾನಿದ್ದೇನೆ. ಹೀಗಂತ ಕಾಗವಾಡದ ಮಾಜಿ ಶಾಸಕ ರಾಜು ಕಾಗೆ ಸ್ಪಷ್ಟನೆ ನೀಡಿದ್ದಾರೆ.

ಈ ರಾಜಕೀಯ ಬೆಳವಣಿಗೆ ಬಗ್ಗೆ 15 ದಿನಗಳ ಹಿಂದೆ ಕಾರ್ಯಕರ್ತರ ಸಭೆ ಕರೆದು ಅವರ ಅನಿಸಿಕೆಗಳನ್ನು ಆಲಿಸಿದ್ದೇನೆ.

ನಂತರ ಬೆಂಗಳೂರಿನಲ್ಲಿ ಪಕ್ಷದ ಮುಖಂಡರನ್ನು ಭೇಟಿಯಾದಾಗ ನನಗೆ ಬಿಜೆಪಿ ಟಿಕೆಟ್ ನಿರಾಕರಿಸಿದ್ದು, ಅನರ್ಹ ಶಾಸಕರ ಪರ ಪ್ರಚಾರ ಮಾಡಬೇಕೆಂದು ಹೇಳಿದ್ದಾರೆ. ವರಿಷ್ಠರ ನಿರ್ಧಾರವನ್ನು ನಿರಾಕರಿಸಿದ್ದೇನೆ. ನನಗೆ ನೀಡಿರುವ ಕಾಡಾ ನಿಗಮದ ಅಧ್ಯಕ್ಷ ಸ್ಥಾನ ಸ್ವೀಕರಿಸಬಾರದೆಂದು ಕಾರ್ಯಕರ್ತರ ನಿಲವು ಇದೆ ಎಂದ್ರು.

ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತೇನೆ:
ಬಿಜೆಪಿ ಪಕ್ಷದ ಹಿರಿಯ ಮುಖಂಡರು ನನಗೆ ಕಾಗವಾಡದಲ್ಲಿ ಟಿಕೆಟ್ ನೀಡಬೇಕು. ಇಲ್ಲದೆ ಹೋದಲ್ಲಿ ನಾನು ಪಕ್ಷೇತರ ಅಥವಾ ಕಾಂಗ್ರೆಸ್ ಪಕ್ಷದ ಟಿಕೆಟ್ ಪಡೆದುಕೊಂಡು ಚುನಾವಣೆ ಎದುರಿಸಲು ಸಿದ್ಧನಾಗಿದ್ದೇನೆ. ಮಾನಸಿಕವಾಗಿ ಚುನಾವಣೆಗೆ ಹೋಗುವ ವಿಚಾರ ದಟ್ಟಾಗಿದೆ ಎಂದಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಸೌಜನ್ಯ ಕೇಸ್ ಗೆ ಬಿಗ್ ಟ್ವಿಸ್ಟ್: ಕೊಲೆಗಾರ ಯಾರೆಂದು ರಿವೀಲ್ ಮಾಡಿದ ಸ್ನೇಹಮಯಿ ಕೃಷ್ಣ

ಪ್ರೀತಿಸುತ್ತಿದ್ದ ಯುವತಿಗೆ ಸ್ನೇಹಿತನಿಂದ ಪದೇ ಪದೇ ಕಾಲ್‌, ಕೆರಳಿದ ಮತ್ತೊಬ್ಬ ಸ್ನೇಹಿತ ಮಾಡಿದ್ದೇನು

Jammu, Kashmir: ಭಯೋತ್ಪಾದಕರ ವಿರುದ್ಧದ ಕಾರ್ಯಚರಣೆಯಲ್ಲಿ ಇಬ್ಬರು ಸೈನಿಕರು ಹುತಾತ್ಮ

ಮದ್ದೂರು ಹಿಂಸಚಾರದಲ್ಲಿ ತಪ್ಪಿತಸ್ಥರ ಸದೆ ಖಂಡಿತಾ: ಶಾಸಕ ಉದಯ

ದೆಹಲಿಯಲ್ಲಿ ಅಮಿತ್ ಶಾ ಭೇಟಿ ಮಾಡಲಿದೆ ಬಿಜೆಪಿ ನಿಯೋಗ: ವಿಜಯೇಂದ್ರ

ಮುಂದಿನ ಸುದ್ದಿ
Show comments