Select Your Language

Notifications

webdunia
webdunia
webdunia
webdunia

ಬಿ.ಎಸ್.ಯಡಿಯೂರಪ್ಪ ಕಣ್ಣ ಮುಂದೆಯೇ ಸಂತ್ರಸ್ಥರ ಮೇಲೆ ಲಾಠಿ ಚಾರ್ಜ್

ಬಿ.ಎಸ್.ಯಡಿಯೂರಪ್ಪ ಕಣ್ಣ ಮುಂದೆಯೇ ಸಂತ್ರಸ್ಥರ ಮೇಲೆ ಲಾಠಿ ಚಾರ್ಜ್
ಗದಗ , ಶುಕ್ರವಾರ, 9 ಆಗಸ್ಟ್ 2019 (18:38 IST)
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಕಣ್ಣಿನ ಎದುರಲ್ಲೇ ಪ್ರವಾಹ ಪೀಡಿತ ಸಂತ್ರಸ್ಥರ ಮೇಲೆ ಲಾಠಿ ಚಾರ್ಜ್ ನಡೆಸಲಾಗಿದೆ.

ಮೂರ್ನಾಲ್ಕು ದಿನಗಳಿಂದ ಭಾರೀ ಪ್ರವಾಹದಿಂದಾಗಿ ಸಂತ್ರಸ್ಥರಾಗಿರೋ ಜನರ ಮೇಲೆ ಪೊಲೀಸರು ಲಾಠಿ ಬೀಸಿರೋದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ಗದಗ ಜಿಲ್ಲೆಯ ಕೊಣ್ಣೂರು ಪ್ರದೇಶದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ರು. ಆಗ ಸಿಎಂ ಕಾರು ಹೊರಡಲು ಅಣಿಯಾಗುತ್ತಿದ್ದಂತೆ ಕಾರಿನ ಹತ್ತಿರ ಸಂತ್ರಸ್ಥರು ಮನವಿ ಮಾಡಿಕೊಳ್ಳಲು ಬರಲಾರಂಭಿಸಿದರು.

ಈ ಸಂದರ್ಭದಲ್ಲಿ ಪ್ರವಾಹ ಪೀಡಿತರಿಗೆ ಪೊಲೀಸರು ಲಾಠಿ ರುಚಿ ತೋರಿಸಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪ ಕೇಳಿಬಂದಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯ ಈ ಕಾರಣಕ್ಕೆ ಪ್ರವಾಹ ಸ್ಥಳಕ್ಕೆ ಭೇಟಿ ನೀಡಿಲ್ಲ