Select Your Language

Notifications

webdunia
webdunia
webdunia
webdunia

ಇಂದು ಸಂಜೆ 6 ಗಂಟೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಬಿಎಸ್ ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರ

ಇಂದು ಸಂಜೆ 6 ಗಂಟೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಬಿಎಸ್ ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರ
ಬೆಂಗಳೂರು , ಶುಕ್ರವಾರ, 26 ಜುಲೈ 2019 (10:42 IST)
ಬೆಂಗಳೂರು : ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಅವರು ಇಂದೇ ಪ್ರಮಾಣವಚನ ಸ್ವೀಕಾರ ಮಾಡಲು ರಾಜ್ಯಪಾಲರು ಅನುಮತಿ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.




ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡ ಹಿನ್ನಲೆಯಲ್ಲಿ ಇದೀಗ ಸರ್ಕಾರ ರಚನೆಗೆ ಹೈಕಮಾಂಡ್ ಸೂಚನೆ  ಮೇರೆಗೆ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಅವರು ರಾಜ್ಯಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. ಅಲ್ಲಿ ರಾಜ್ಯಪಾಲರ ಮುಂದೆ ಬಿಎಸ್ ವೈ ಸರ್ಕಾರ ರಚನೆಯ ಹಕ್ಕು ಮಂಡಿಸಿ ಮನವಿ ಮಾಡಿದ್ದಾರೆ.


ಇದಕ್ಕೆ ಒಪ್ಪಿದ ರಾಜ್ಯಪಾಲ ವಜೂಭಾಯ್  ವಾಲಾ ಅವರು ಇಂದು ಸಂಜೆ 6 ಗಂಟೆಗೆ ರಾಜ್ಯ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಲು ಅನುಮತಿ ನೀಡಿದ್ದಾರೆ ಎನ್ನಲಾಗಿದೆ,  ಆ ಮೂಲಕ ಬಿಎಸ್ ಯಡಿಯೂಪ್ಪ ಅವರು 4ನೇ ಬಾರಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಕಾರ್ಗಿಲ್ ದಿವಸ್: ಹಳೆಯ ನೆನಪು ಮೆಲುಕು ಹಾಕಿದ ಪ್ರಧಾನಿ ಮೋದಿ