Webdunia - Bharat's app for daily news and videos

Install App

ಬಿ.ಎಸ್.ಯಡಿಯೂರಪ್ಪಗೆ ಖಡಕ್ ಎಚ್ಚರಿಕೆ ನೀಡಿದ ರೈತ

Webdunia
ಬುಧವಾರ, 11 ಡಿಸೆಂಬರ್ 2019 (16:18 IST)
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅಧಿಕಾರಿಗಳಿಗೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಎಚ್ಚರಿಕೆ ನೀಡಿದ್ದಾರೆ.

ಸೂಕ್ತ ಪರಿಹಾರ ಕೊಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ಹೀಗಂತ  ಮಂಡ್ಯದ  ಚಿಕ್ಕಸೋಮನಹಳ್ಳಿಯ ರೈತ ಶಿವಸ್ವಾಮಿ ಅವರಿಂದ ಅಧಿಕಾರಿಗಳಿಗೆ ಎಚ್ಚರಿಕೆ ಹಾಕಲಾಗಿದೆ.

ಮಂಡ್ಯದ  ಸಂತೇಬಾಚಹಳ್ಳಿ ಹೋಬಳಿಯ ಚಿಕ್ಕಸೋಮನಹಳ್ಳಿ ಗ್ರಾಮದ ರೈತರಾದ  ಗಾಡಿನಿಂಗೇಗೌಡರ ಪುತ್ರ ಶಿವಸ್ವಾಮಿ,  
ಸರ್ವೇ ನಂಬರ್ 39 ರಲ್ಲಿ ಎರಡು ಎಕರೆ ಕೃಷಿ ಭೂಮಿಯನ್ನು ಹೊಂದಿದ್ದಾರೆ. ಇಬ್ಬರೂ ಮಕ್ಕಳಿಗೆ ತಲಾ ಒಂದೊಂದು ಎಕರೆ ಭೂಮಿಯನ್ನು ಹಂಚಿದ್ದಾರೆ.

ಕೇವಲ ಒಂದು ಎಕರೆ ಜೀವನಾಧಾರವಾದ ಕೃಷಿ ಭೂಮಿಯಲ್ಲಿ ವಿದ್ಯುತ್ ಲೈನನ್ನು ಎಳೆದಿರುವುದರಿಂದ  ಬೇಸಾಯ ಮಾಡಲಾಗದೇ ಅತಂತ್ರ ವಾತಾವರಣ ನಿರ್ಮಾಣವಾಗಿದೆ.

ದಿನದ 24 ಗಂಟೆಗಳ ಕಾಲವೂ ವಿದ್ಯುತ್ ಹರಿಯುವ  ಅಪಾಯಕಾರಿ 66/11ಕೆ.ವಿ ವಿದ್ಯುತ್ ಲೈನಿನ ಕೆಳಗೆ ಬೇಸಾಯ ನಡೆಸಿ ಬದುಕು ಸಾಗಿಸಬೇಕಾಗಿದೆ. ವಿದ್ಯುತ್ ಲೈನಿನ ಕೆಳಭಾಗದ ಗಿಡಮರಗಳು ಸಂಪೂರ್ಣವಾಗಿ ನಾಶವಾಗುತ್ತಿವೆ.
ಅಧಿಕಾರಿಗಳು ನಮ್ಮ ಮೇಲೆ  ದೌರ್ಜನ್ಯ ಮಾಡುತ್ತಿದ್ದಾರೆ. ನಾವು ಸತ್ತರೆ ಅಧಿಕಾರಿಗಳೇ ಹೊಣೆಗಾರರಾಗುತ್ತಾರೆ ಎಂದು ನೊಂದ ರೈತ ಶಿವಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಪೊಲೀಸ್ ಅಧಿಕಾರಿಗಳು ನಮ್ಮನ್ನೆಲ್ಲ ಜೈಲಿಗೆ ಕಳಿಸುತ್ತೇವೆ ಎನ್ನುತ್ತಾರೆ.  ನಾವು ಜಮೀನು ಕೊಟ್ಟು ನಮ್ಮನ್ನೇ ಜೈಲಿಗೆ ಕಳಿಸುತ್ತಾರೆ. ನಮಗೆ ಇರೋದು ಒಂದೇ ಎಕರೆ ಜಮೀನು. ಜಮೀನು ಕಳೆದುಕೊಂಡು ನಾವು ಜೈಲಿಗೆ ಹೋಗಬೇಕಾ? ಅಂತ ರೈತ ಕೇಳಿದ್ದಾರೆ.

ಸರಕಾರ ನೆರವಿಗೆ ಬರುವಂತೆ ಕೋರಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments