ಬಿ.ಎಸ್.ಯಡಿಯೂರಪ್ಪಗೆ ಖಡಕ್ ಎಚ್ಚರಿಕೆ ನೀಡಿದ ರೈತ

Webdunia
ಬುಧವಾರ, 11 ಡಿಸೆಂಬರ್ 2019 (16:18 IST)
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅಧಿಕಾರಿಗಳಿಗೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಎಚ್ಚರಿಕೆ ನೀಡಿದ್ದಾರೆ.

ಸೂಕ್ತ ಪರಿಹಾರ ಕೊಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ಹೀಗಂತ  ಮಂಡ್ಯದ  ಚಿಕ್ಕಸೋಮನಹಳ್ಳಿಯ ರೈತ ಶಿವಸ್ವಾಮಿ ಅವರಿಂದ ಅಧಿಕಾರಿಗಳಿಗೆ ಎಚ್ಚರಿಕೆ ಹಾಕಲಾಗಿದೆ.

ಮಂಡ್ಯದ  ಸಂತೇಬಾಚಹಳ್ಳಿ ಹೋಬಳಿಯ ಚಿಕ್ಕಸೋಮನಹಳ್ಳಿ ಗ್ರಾಮದ ರೈತರಾದ  ಗಾಡಿನಿಂಗೇಗೌಡರ ಪುತ್ರ ಶಿವಸ್ವಾಮಿ,  
ಸರ್ವೇ ನಂಬರ್ 39 ರಲ್ಲಿ ಎರಡು ಎಕರೆ ಕೃಷಿ ಭೂಮಿಯನ್ನು ಹೊಂದಿದ್ದಾರೆ. ಇಬ್ಬರೂ ಮಕ್ಕಳಿಗೆ ತಲಾ ಒಂದೊಂದು ಎಕರೆ ಭೂಮಿಯನ್ನು ಹಂಚಿದ್ದಾರೆ.

ಕೇವಲ ಒಂದು ಎಕರೆ ಜೀವನಾಧಾರವಾದ ಕೃಷಿ ಭೂಮಿಯಲ್ಲಿ ವಿದ್ಯುತ್ ಲೈನನ್ನು ಎಳೆದಿರುವುದರಿಂದ  ಬೇಸಾಯ ಮಾಡಲಾಗದೇ ಅತಂತ್ರ ವಾತಾವರಣ ನಿರ್ಮಾಣವಾಗಿದೆ.

ದಿನದ 24 ಗಂಟೆಗಳ ಕಾಲವೂ ವಿದ್ಯುತ್ ಹರಿಯುವ  ಅಪಾಯಕಾರಿ 66/11ಕೆ.ವಿ ವಿದ್ಯುತ್ ಲೈನಿನ ಕೆಳಗೆ ಬೇಸಾಯ ನಡೆಸಿ ಬದುಕು ಸಾಗಿಸಬೇಕಾಗಿದೆ. ವಿದ್ಯುತ್ ಲೈನಿನ ಕೆಳಭಾಗದ ಗಿಡಮರಗಳು ಸಂಪೂರ್ಣವಾಗಿ ನಾಶವಾಗುತ್ತಿವೆ.
ಅಧಿಕಾರಿಗಳು ನಮ್ಮ ಮೇಲೆ  ದೌರ್ಜನ್ಯ ಮಾಡುತ್ತಿದ್ದಾರೆ. ನಾವು ಸತ್ತರೆ ಅಧಿಕಾರಿಗಳೇ ಹೊಣೆಗಾರರಾಗುತ್ತಾರೆ ಎಂದು ನೊಂದ ರೈತ ಶಿವಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಪೊಲೀಸ್ ಅಧಿಕಾರಿಗಳು ನಮ್ಮನ್ನೆಲ್ಲ ಜೈಲಿಗೆ ಕಳಿಸುತ್ತೇವೆ ಎನ್ನುತ್ತಾರೆ.  ನಾವು ಜಮೀನು ಕೊಟ್ಟು ನಮ್ಮನ್ನೇ ಜೈಲಿಗೆ ಕಳಿಸುತ್ತಾರೆ. ನಮಗೆ ಇರೋದು ಒಂದೇ ಎಕರೆ ಜಮೀನು. ಜಮೀನು ಕಳೆದುಕೊಂಡು ನಾವು ಜೈಲಿಗೆ ಹೋಗಬೇಕಾ? ಅಂತ ರೈತ ಕೇಳಿದ್ದಾರೆ.

ಸರಕಾರ ನೆರವಿಗೆ ಬರುವಂತೆ ಕೋರಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments