ಲಾಕ್ ಡೌನ್ ಮುಂದುವರಿಯುತ್ತೆ ಎಂದು ಎಚ್ಚರಿಸಿದ ಬಿ.ಎಸ್.ಯಡಿಯೂರಪ್ಪ

Webdunia
ಸೋಮವಾರ, 30 ಮಾರ್ಚ್ 2020 (18:17 IST)
ದೇಶದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಲಾಕ್ ಡೌನ್ ಮಾಡಲಾಗಿದೆ. ಆದರೂ ರಾಜ್ಯದಲ್ಲಿ ಜನರು ನಿರ್ಲಕ್ಷ್ಯ ತೋರಿ ಹೊರಗಡೆ ತಿರುಗಾಡುತ್ತಿದ್ದಾರೆ. ಇದರಿಂದ ಗರಂ ಆಗಿರೋ ಸಿಎಂ ಬಿ.ಎಸ್.ಯಡಿಯೂರಪ್ಪ ಜನತೆಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಎಲ್ಲ ಜನರೂ ಲಾಕ್ ಡೌನ್ ನ್ನು ಕಡ್ಡಾಯವಾಗಿ ಹಾಗೂ ಕಟ್ಟುನಿಟ್ಟಾಗಿ ಪರಿಪಾಲನೆ ಮಾಡಲೇಬೇಕು. ಹೀಗಾದಾಗ ಮಾತ್ರ ಏಪ್ರಿಲ್ 14 ರಂದು ಇದು ಕೊನೆಯಾಗುತ್ತದೆ. ಆದರೆ ಜನರು ಮನೆಯಿಂದ ವಿನಾಕಾರಣ ಹೊರಗೆ ಬಂದು ತಿರುಗಾಡುವುದನ್ನು ಮುಂದುವರಿಸಿದರೆ ಲಾಕ್ ಡೌನ್ ಮುಂದುವರೆಯಲಿದೆ ಅಂತ ಸಿಎಂ ಹೇಳಿದ್ದಾರೆ.

ಇನ್ನೂ 16 ದಿನ ಮನೆಯಲ್ಲೇ ಇರಿ. ಮನೆಯಲ್ಲೇ ಇದ್ದು ಲಾಕ್ ಡೌನ್ ಶೀಘ್ರ ಕೊನೆಗೊಳ್ಳಲು ಸಹಕಾರ ನೀಡಿ. ಬೀದಿಗೆ ಬಂದು ಅಡ್ಡಾಡಿದರೆ ಲಾಕ್ ಡೌನ್ ಮುಂದುವರಿಸೋದು ಖಂಡಿತ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಹಸಿದವನ ಹೊಟ್ಟೆಗೆ ಹೊಡೆದ ಪಡೆದ ದುಡ್ಡು ಈತನಿಗೆ ದಕ್ಕುತ್ತಾ: ದುಡ್ಡು ತಗೊಂಡು ಊಟ ಕೊಡದ ವ್ಯಾಪಾರಿ Video

ಸೂರಿಕುಮೇರು ಕೆ.ಗೋವಿಂದ ಭಟ್ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ

ಯುದ್ಧದ ನಡುವೆಯೂ ಭಾರತಕ್ಕೆ ಗುಡ್ ನ್ಯೂಸ್ ಕೊಟ್ಟ ಇರಾನ್

ನಡಿಯೋ ಮನೆಗೆ...ಕುಡಿದು ಫುಲ್ ಟೈಟ್ ಆಗಿದ್ದ ಮಾಲಿಕನನ್ನು ತಾನೇ ಮನೆಗೆ ಕರೆದೊಯ್ದ ಎತ್ತು Video

ಮುಂದಿನ ಸುದ್ದಿ
Show comments