Webdunia - Bharat's app for daily news and videos

Install App

ನಿಮ್ಮ ಜೀವನ ತೆರೆದ ಪುಸ್ತಕ ಅಂತೀರಿ, ಮುಡಾ ಹಗರಣ ಸಿಬಿಐಗೆ ಒಪ್ಪಿಸಿ: ಸಿದ್ದರಾಮಯ್ಯಗೆ ಬಿಎಸ್ ವೈ ಆಗ್ರಹ

Krishnaveni K
ಬುಧವಾರ, 6 ನವೆಂಬರ್ 2024 (16:38 IST)
ಬೆಂಗಳೂರು: ಲೋಕಾಯುಕ್ತ ತನಿಖೆಯಿಂದ ಏನೂ ಮಾಡಲು ಸಾಧ್ಯವಿಲ್ಲ. ಈ ರಾಜಕೀಯ ದೊಂಬರಾಟ ಮಾಡಿ, ತಾನು ಸಾಚಾ ಎಂದು ತೋರಿಸಿಕೊಳ್ಳುವ ಪ್ರಯತ್ನ ಮುಖ್ಯಮಂತ್ರಿಗಳದು ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರ ಸಂಸದೀಯ ಸಮಿತಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಆಕ್ಷೇಪಿಸಿದರು.

ಚನ್ನಪಟ್ಟಣ ಚುನಾವಣಾ ಪ್ರಚಾರಕ್ಕೆ ಹೊರಡುವ ಮುನ್ನ ಅವರು ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಮುಖ್ಯಮಂತ್ರಿಗಳಿಗೆ ನಿಜಕ್ಕೂ ಪ್ರಾಮಾಣಿಕತೆ ಇದ್ದರೆ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು. ಇದರಿಂದ ವಾಸ್ತವಿಕ ವಿಚಾರಗಳು ಹೊರಕ್ಕೆ ಬರಲು ಸಾಧ್ಯ ಎಂದು ನುಡಿದರು.

ಮುಖ್ಯಮಂತ್ರಿಗಳು ತಮ್ಮ ಜೀವನ ತೆರೆದ ಪುಸ್ತಕ ಎನ್ನುತ್ತಿದ್ದಾರೆ. ಲೋಕಾಯುಕ್ತದ ಬದಲಾಗಿ ತಮ್ಮ ಕುಟುಂಬದ ನಿವೇಶನ ಹಂಚಿಕೆ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ ಪ್ರಾಮಾಣಿಕತೆಯನ್ನು ತೋರಿಸಲಿ ಎಂದು ಒತ್ತಾಯಿಸಿದರು. ಉಪ ಚುನಾವಣೆ ಸಂಬಂಧ ಪ್ರಶ್ನಿಸಿದಾಗ, 3ಕ್ಕೆ 3 ಕ್ಷೇತ್ರಗಳನ್ನು ಎನ್‍ಡಿಎ ಗೆಲ್ಲುವ ವಿಶ್ವಾಸವಿದೆ ಎಂದು ಅವರು ಉತ್ತರ ಕೊಟ್ಟರು.

ಅಬಕಾರಿ ಇಲಾಖೆಯಲ್ಲಿ ಸಾವಿರಾರು ಕೋಟಿಯ ಹಗರಣ ನಡೆದಿದ್ದು, ಆ ಸಚಿವರು ಮತ್ತು ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕೆಂದು ಅವರು ಒತ್ತಾಯಿಸಿದರು. ಲಕ್ಷ್ಮಿ ಹೆಬ್ಬಾಳ್ಕರ್ ಅವರ ಇಲಾಖೆಯಲ್ಲಿ ಅಧಿಕಾರಿ ಆತ್ಮಹತ್ಯೆ ಕುರಿತು ತನಿಖೆ ನಡೆದು ಸತ್ಯ ಹೊರಬರಲಿ; ಆಮೇಲೆ ಪ್ರತಿಕ್ರಿಯೆ ಕೊಡುವುದಾಗಿ ಹೇಳಿದರು.

ರಾಜ್ಯದೆಲ್ಲೆಡೆ ವಕ್ಫ್ ಒತ್ತುವರಿ ನಡೆದಿದೆ. ಇದರ ಕುರಿತು ಸಮಗ್ರ ತನಿಖೆ ನಡೆಸಬೇಕಿದೆ. ಅಲ್ಲದೇ, ಸಂಬಂಧಿತ ಸಚಿವ ರಾಜೀನಾಮೆ ಕೊಡಬೇಕು ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.
 
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments