Webdunia - Bharat's app for daily news and videos

Install App

ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಆದ್ರೂ ಬಿಟ್ಟಿ ಪ್ರಚಾರ: ಯಡಿಯೂರಪ್ಪ

Krishnaveni K
ಶುಕ್ರವಾರ, 20 ಜೂನ್ 2025 (14:57 IST)
ಬೆಂಗಳೂರು: ರಾಜ್ಯ ಸರಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಬಹುತೇಕ ಅಭಿವೃದ್ಧಿ ಕೆಲಸಗಳು ಸ್ಥಗಿತವಾಗಿವೆ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆರೋಪಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಮಾತನಾಡಿದ ಅವರು, ಜನರ ಸಂಕಷ್ಟಗಳನ್ನು ಯಾರೂ ಕೇಳುವವರಿಲ್ಲ ಎಂಬಂಥ ದುಸ್ಥಿತಿ ಬಂದಿದೆ. ಕೇವಲ ಪ್ರಚಾರದಲ್ಲಿ ಇವರು ತೊಡಗಿದ್ದು, ಅಭಿವೃದ್ಧಿ ಕಡೆ ಗಮನ ಕೊಡುತ್ತಿಲ್ಲ ಎಂದು ಆಕ್ಷೇಪಿಸಿದರು.
ನೀರಾವರಿ ಯೋಜನೆಗಳು ಸಂಪೂರ್ಣ ಸ್ಥಗಿತವಾಗಿವೆ. ಕರ್ನಾಟಕದ ಯಾವುದೇ ಮೂಲೆಯಲ್ಲಾದರೂ ಒಂದು ಕಿಮೀ ರಸ್ತೆ ಆಗುತ್ತಿರುವುದನ್ನು ಈ ಸರಕಾರ ತೋರಿಸಲಿ ಎಂದು ಸವಾಲು ಹಾಕಿದರು. ಈ ಸರಕಾರ ತುಘಲಕ್ ದರ್ಬಾರ್ ಮಾಡುತ್ತಿದೆ ಎಂದು ಆರೋಪಿಸಿದರು.

ನಾವು ಅಲ್ಪಸಂಖ್ಯಾತರ ವಿರೋಧಿಗಳಲ್ಲ; ಆದರೆ, ಅಲ್ಪಸಂಖ್ಯಾತರಿಗೆ ಮಿತಿ ಮೀರಿ ನೆರವು ಕೊಡುವುದು ಅಕ್ಷಮ್ಯ ಅಪರಾಧ. ಪರಿಶಿಷ್ಟ ಜಾತಿ, ವರ್ಗದ ಜನರಿಗೆ ಹೆಚ್ಚು ಅನುಕೂಲ ಮಾಡಿಕೊಡಬೇಕಾದ ಈ ಸರಕಾರವು ಕೇವಲ ಮತಬ್ಯಾಂಕ್ ರಾಜಕಾರಣಕ್ಕಾಗಿ ಅಲ್ಪಸಂಖ್ಯಾತರನ್ನು ತೃಪ್ತಿ ಪಡಿಸುವ ಕೆಲಸದಲ್ಲಿ ತೊಡಗಿದ್ದು, ಇದನ್ನು ನಾವೆಲ್ಲರೂ ಖಂಡಿಸುತ್ತೇವೆ ಎಂದರು. ಈಗಲಾದರೂ ಸರಕಾರ ಜಾಗೃತವಾಗಿ ಅಭಿವೃದ್ಧಿ ಕಡೆ ಗಮನ ಕೊಡಬೇಕು. ಎಲ್ಲ ವರ್ಗದ ಜನರಿಗೆ ನ್ಯಾಯ ಒದಗಿಸಿ ಕೊಡುವ ಕೆಲಸ ಮಾಡಬೇಕೆಂದು ಒತ್ತಾಯಿಸಿದರು.
 
ಹಣ ಕೊಟ್ಟು ಆಶ್ರಯ ಮನೆ ಪಡೆಯಬೇಕಿದೆ ಎಂಬ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲರ ಆಡಿಯೋ ವೈರಲ್ ಆದ ಕುರಿತ ಪ್ರಶ್ನೆಗೆ ಉತ್ತರ ನೀಡಿದರು. ಬಿ.ಆರ್.ಪಾಟೀಲ್ ಹೇಳಿದ್ದು ನೂರಕ್ಕೆ ನೂರು ಸತ್ಯ. ಹಣ ಕೊಡದೆ ಯಾವುದೇ ಕೆಲಸ ಆಗುವುದಿಲ್ಲ ಎಂಬುದು ಸಾಬೀತಾಗಿದೆ ಎಂದು ನುಡಿದರು. ಬಡವರು ಮನೆ ಬೇಕೆಂದರೂ ದುಡ್ಡು ಕೊಟ್ಟು ತೆಗೆದುಕೊಳ್ಳಬೇಕಾಗಿದೆ. ಸರಕಾರ ತಪ್ಪÀನ್ನು ಒಪ್ಪಿಕೊಂಡು ಅದನ್ನು ಸರಿಪಡಿಸಿ ಬಡವರಿಗೆ ನ್ಯಾಯ ಒದಗಿಸಿಕೊಡಲಿ ಎಂದು ಆಗ್ರಹಿಸಿದರು.

ಕೇಂದ್ರ ಸಚಿವ, ಜೆಡಿಎಸ್‍ನ ಎಚ್.ಡಿ.ಕುಮಾರಸ್ವಾಮಿ ಅವರ ಮಾತು ಎಲ್ಲರೂ ಒಟ್ಟಾಗಿ ಹೋಗುತ್ತೇವೆ ಎಂಬ ಅರ್ಥ ನೀಡುವಂತಿದೆ ಎಂದು ಪ್ರಶ್ನೆಗೆ ಉತ್ತರ ನೀಡಿದರು. ಬಿಜೆಪಿ- ಜೆಡಿಎಸ್ ಬೇರೆಯಲ್ಲ; ನಾವು ಒಟ್ಟಾಗಿ ಮುಂದುವರೆಯುತ್ತೇವೆ. ಎಚ್.ಡಿ.ದೇವೇಗೌಡರು ಕೂಡ ಹಲವು ಬಾರಿ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಜೀ ಅವರ ಬಗ್ಗೆ ನಂಬಿಕೆ- ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ- ಜೆಡಿಎಸ್ ಮುಂದಿನ ದಿನಗಳಲ್ಲಿ ಒಟ್ಟಾಗಿ ಮುನ್ನಡೆದು ಹೇಗಾದರೂ ಮಾಡಿ ಸರಕಾರವನ್ನು ಇಳಿಸಿ ನಮ್ಮ ಸರಕಾರ ಅಧಿಕಾರಕ್ಕೆ ಬರಬೇಕಿದೆ. ಆ ನಿಟ್ಟಿನಲ್ಲಿ ಅಗತ್ಯ ಪ್ರಯತ್ನ ಮಾಡುತ್ತೇವೆ ಎಂದರು.

ಅಸಮಾಧಾನಿತರನ್ನು ಕರೆದು ಮಾತನಾಡಿ ಸಮಸ್ಯೆ ಬಗೆಹರಿಸುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಪ್ರಯತ್ನವನ್ನು ನಾನು ಸ್ವಾಗತಿಸುವೆ ಎಂದು ಅವರು ಮತ್ತೊಂದು ಪ್ರಶ್ನೆಗೆ ಉತ್ತರ ಕೊಟ್ಟರು. ಅಸಮಾಧಾನದಿಂದ ಯಾರೇ ಇದ್ದರೂ ಅವರ ಜೊತೆ ಮಾತನಾಡಲು ನಾನು ಸಿದ್ಧ. ಪ್ರತಿನಿತ್ಯ ಈ ಕಚೇರಿಗೆ ಬಂದು ಮಧ್ಯಾಹ್ನದ ವರೆಗೆ ಇಲ್ಲಿ ಇರಲು ನಿರ್ಧರಿಸಿದ್ದೇನೆ. ಪ್ರತಿ ವಾರ ಒಂದೆರಡು ಜಿಲ್ಲೆಗೆ ಭೇಟಿ ನೀಡುವೆ ಎಂದು ಪ್ರಕಟಿಸಿದರು.
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿಗೆ ಬಂದ ಅಮಿತ್ ಶಾ ಏನು ಹೇಳಿದ್ರು: ಗುಟ್ಟು ಬಿಟ್ಟು ಕೊಟ್ಟ ಬಿವೈ ವಿಜಯೇಂದ್ರ

Arecanut price today: ಇಂದಿನ ಅಡಿಕೆ, ಕಾಳುಮೆಣಸು ಮಾರುಕಟ್ಟೆ ದರ ಹೇಗಿದೆ ನೋಡಿ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸರ್ಕಾರಿ ನೌಕರರು, ಗುತ್ತಿಗೆದಾರರಿಗೆ ಗುಡ್ ನ್ಯೂಸ್: ಆರೋಗ್ಯ ಇಲಾಖೆಯಿಂದ ಭರ್ಜರಿ ಆಫರ್

ಪಾಕಿಸ್ತಾನವನ್ನು ನೈಸ್ ಮಾಡುತ್ತಿರುವ ಡೊನಾಲ್ಡ್ ಟ್ರಂಪ್ ಗಿದೆ ಖತರ್ನಾಕ್ ಪ್ಲ್ಯಾನ್

ಮುಂದಿನ ಸುದ್ದಿ
Show comments