Webdunia - Bharat's app for daily news and videos

Install App

ಚಿಕ್ಕಮಗಳೂರು ಟಿಕೆಟ್: ಶೋಭಾ ಕರಂದ್ಲಾಜೆಗೆ ಯಡಿಯೂರಪ್ಪ ಸಪೋರ್ಟ್

Krishnaveni K
ಶನಿವಾರ, 2 ಮಾರ್ಚ್ 2024 (16:14 IST)
Photo Courtesy: Twitter
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ಗಾಗಿ ಬಿಜೆಪಿಯಲ್ಲಿ ತೀವ್ರ ಪೈಪೋಟಿಯಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಟಿಕೆಟ್ ಕೊಡುವುದಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬೆಂಬಲವಾಗಿ ನಿಂತಿದ್ದಾರೆ.

ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ಗಾಗಿ ಮಾಜಿ ಸಚಿವ ಸಿಟಿ ರವಿ, ಪ್ರಮೋದ್ ಮಧ‍್ವರಾಜ್, ಶಾಸಕ ಡಿಎನ್ ಜೀವರಾಜ್ ನಡುವೆ ತೀವ್ರ ಪೈಪೋಟಿಯಿದೆ. ಜೊತೆಗೆ ಇಲ್ಲಿ ಇತ್ತೀಚೆಗೆ ಶೋಭಾ ಕರಂದ್ಲಾಜೆ ವಿರೋಧಿ ಅಲೆ ಕಂಡುಬಂದಿದೆ. ಕಾರ್ಯಕರ್ತರೇ ಶೋಭಾ ಕರಂದ್ಲಾಜೆ ವಿರುದ್ಧ ನಿಂತಿದ್ದಾರೆ.

ಹೀಗಾಗಿ ಹಾಲಿ ಸಂಸದೆಗೆ ಹ್ಯಾಟ್ರಿಕ್ ಗೆಲುವು ಕಷ್ಟ ಎನ್ನಲಾಗುತ್ತಿದೆ. ಆದರೆ ಮಾಜಿ ಸಿಎಂ ಯಡಿಯೂರಪ್ಪ ಮಾತ್ರ ಶೋಭಾ ಕರಂದ್ಲಾಜೆಗೆ ಬೆಂಬಲವಾಗಿ ನಿಂತಿದ್ದಾರೆ. ಅಲ್ಲದೆ, ಗೋ ಬ್ಯಾಕ್ ಶೋಭಾ ಎಂದು ಅಭಿಯಾನ ನಡೆಸಿದ ಕಾರ್ಯಕರ್ತರ ವಿರುದ್ಧವೇ ಸಿಡಿದೆದ್ದಿದ್ದಾರೆ.

ಉಡುಪಿ ಚಿಕ್ಕಮಗಳೂರು ಕ್ಷೇತ್ರ ಬಿಜೆಪಿಯ ಭದ್ರಕೋಟೆಗಳಲ್ಲಿ ಒಂದು. ಇಲ್ಲಿ ಗೆಲ್ಲುವುದು ಬಿಜೆಪಿಗೆ ಪ್ರತಿಷ್ಠೆಯ ವಿಷಯವಾಗಿದೆ. ಆದರೆ ಇಲ್ಲಿ ಈಗ ಶೋಭಾ ವಿರುದ್ಧ ಮೂಡಿರುವ ಭಿನ್ನಮತದ ರಾಗ ಚುನಾವಣೆಯಲ್ಲಿ ಮುಳುಗವಾಗಬಹುದು ಎನ್ನಲಾಗಿದೆ. ಹೀಗಾಗಿ ಸ್ಥಳೀಯ ನಾಯಕರು, ಕಾರ್ಯಕರ್ತರನ್ನು ಎದುರು ಹಾಕಿಕೊಂಡು ಶೋಭಾಗೆ ಇಲ್ಲಿ ಚುನಾವಣೆ ಗೆಲ್ಲುವುದು ಸುಲಭವಲ್ಲ. ಹೀಗಾಗಿ ಯಡಿಯೂರಪ್ಪ ಬೆಂಬಲ ಅವರಿಗೆ ಆನೆಬಲ ತಂದಂತಾಗಿದೆ.

ಶೋಭಾ ಪರವಾಗಿ ಬ್ಯಾಟ್ ಬೀಸಿರುವ ಯಡಿಯೂರಪ್ಪ ನಮಗೆ ಶೋಭಾ ಅವರನ್ನು ಬದಲಿಸುವ ಉದ್ದೇಶವಿಲ್ಲ ಎಂದಿದ್ದಾರೆ. ಅಲ್ಲದೆ, ಗೋ ಬ್ಯಾಕ್ ಎಂದು ಕೂಗಿದವರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಬಿಜೆಪಿಯ ಸಂಸದೀಯ ಮಂಡಳಿ ಸದಸ್ಯರಾಗಿರುವ ಯಡಿಯೂರಪ್ಪಗೆ ಕೇಂದ್ರ ಮಟ್ಟದಲ್ಲೂ ಭಾರೀ ಪ್ರಭಾವವಿದೆ. ಹೀಗಾಗಿ ಅವರ ಹೇಳಿಕೆ, ಅಭಿಪ್ರಾಯಕ್ಕೆ ಅಷ್ಟೇ ಬೆಲೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments