Webdunia - Bharat's app for daily news and videos

Install App

ನನ್ನ ಕಪ್ಪು ಕೋಟು ತೆಗೆಸಿ ರಾಜಕಾರಣಕ್ಕೆ ಕರೆತಂದವರು ಅನಂತಕುಮಾರ್: ಬಿಎಸ್ ವೈ ಕಂಬನಿ

Webdunia
ಸೋಮವಾರ, 12 ನವೆಂಬರ್ 2018 (09:27 IST)
ಬೆಂಗಳೂರು: ನಾನು ಕಪ್ಪು ಕೋಟು ಹಾಕಿಕೊಂಡು ಹೈಕೋರ್ಟ್ ನಲ್ಲಿ ಲಾಯರ್ ಆಗಿ ವೃತ್ತಿ ಜೀವನ ಆರಂಭಿಸಬೇಕಾದರೆ ನನ್ನ ಕೋಟು ತೆಗೆಸಿ ರಾಜಕಾರಣಕ್ಕೆ ನೀನು ಸರಿಯಾದ ವ್ಯಕ್ತಿ ಎಂದು ಗುರುತಿಸಿ ರಾಜಕೀಯಕ್ಕೆ ಕರೆತಂದ ಸ್ನೇಹಿತ ಎಂದು ಅನಂತ ಕುಮಾರ್ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕಂಬನಿ ಮಿಡಿದಿದ್ದಾರೆ.

ಅನಂತ ಕುಮಾರ್ ಪಾರ್ಥಿವ ದರ್ಶನ ಪಡೆಯಲು ಬಂದ ಬಿಎಸ್ ವೈ ಮಾಧ್ಯಮಗಳೊಂದಿಗೆ ಮಾತನಾಡಿ, ತಮ್ಮ ಹಾಗೂ ಅವರ ನಡುವಿನ ನಿಕಟ ಸಂಬಂಧದ ಮೆಲುಕು ಹಾಕಿದ್ದಾರೆ.

ಸರಳ ಸಜ್ಜನಿಕೆಯ, ಪ್ರಾಮಾಣಿಕ ವ್ಯಕ್ತಿಯನ್ನು ಕಳೆದುಕೊಂಡು ಪಕ್ಷ, ರಾಜ್ಯ ಮತ್ತು ರಾಷ್ಟ್ರ ಬಡವಾಗಿದೆ. ನಮ್ಮ ಬೆಂಗಳೂರಿನಲ್ಲಿ ಈವತ್ತು, ಮೆಟ್ರೋ ಅಭಿವೃದ್ಧಿಯಾಗಿದೆ ಎಂದರೆ, ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರು ಬರಲು ಅನಂತ ಕುಮಾರ್ ಅವರೇ ಕಾರಣ.

ಅನಂತ ಕುಮಾರ್ ಮದುವೆಯಾದ ಸಂದರ್ಭದಲ್ಲಿ ಸುಮಾರು ಎರಡು ವರ್ಷಗಳ ಕಾಲ ಅವರ ಜತೆಯೇ ಇದ್ದು ನಾನು ರಾಜ್ಯಾಧ್ಯಕ್ಷನಾಗಿ ಅವರು ಪ್ರಧಾನ ಕಾರ್ಯದರ್ಶಿಯಾಗಿ ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿದ್ದೇವೆ. ರಾಜ್ಯದಲ್ಲಿ ಬಿಜೆಪಿ ಇಂದು ಪ್ರಧಾನ ಪಕ್ಷವಾಗಿ ಬೆಳೆಯಲು ಅನಂತಕುಮಾರ್ ಕೊಡುಗೆ ಕಾರಣ ಎಂದು ಬಿಎಸ್ ವೈ ಬಣ್ಣಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments