Webdunia - Bharat's app for daily news and videos

Install App

ಜನಾರ್ಧನ ರೆಡ್ಡಿ ನಮ್ಮ ಪಕ್ಷದಲ್ಲಿ ಇಲ್ಲ, ಹಾಗಿದ್ದ ಮೇಲೆ ನಾವ್ಯಾಕೆ ವಿಪಕ್ಷದವರನ್ನು ದೂರೋಣ? ಬಿಎಸ್ ವೈ ಪ್ರಶ್ನೆ

Webdunia
ಗುರುವಾರ, 8 ನವೆಂಬರ್ 2018 (09:05 IST)
ಮಂಗಳೂರು: ಆಂಬಿಡೆಂಟ್ ಕಂಪನಿಯ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಗಣಿ ದಣಿ ಜನಾರ್ಧನ ರೆಡ್ಡಿ ಬಂಧನಕ್ಕಾಗಿ ಸಿಸಿಬಿ ಪೊಲೀಸರು ಬಲೆ ಬೀಸುತ್ತಿದ್ದರೆ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಜನಾರ್ಧನ ರೆಡ್ಡಿ ಈಗ ನಮ್ಮ ಪಕ್ಷದಲ್ಲಿಲ್ಲ. ಹಾಗಿರುವಾಗ ನಾವು ಯಾಕೆ ವಿಪಕ್ಷದವರ ಕೈವಾಡ ಎಂದೆಲ್ಲಾ ದೂರೋಣ? ಅಕ್ರಮ ನಡೆಸಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಿ. ಅದಕ್ಕೂ ನಮಗೂ ಸಂಬಂಧವಿಲ್ಲ ಎಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ನೇತೃತ್ವ ವಹಿಸಲು ಕೇರಳಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿ ಯಡಿಯೂರಪ್ಪಗೆ ರೆಡ್ಡಿ ಪ್ರಕರಣದ ಬಗ್ಗೆ ಪತ್ರಕರ್ತರು ಪ್ರಶ್ನೆ ಮಾಡಿದ್ದಾರೆ. ಆದರೆ ಇದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಕಾನೂನು ಪ್ರಕಾರ ಏನು ಕ್ರಮ ಕೈಗೊಳ್ಳುತ್ತಾರೋ ಕೈಗೊಳ್ಳಲಿ. ಈ ಪ್ರಕರಣದ ಬಗ್ಗೆ ನನಗೇನೂ ಮಾಹಿತಿಯಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments