Select Your Language

Notifications

webdunia
webdunia
webdunia
webdunia

ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಯಲು ರೆಡಿಯಾದ ಯಡಿಯೂರಪ್ಪ!

ಬಿಎಸ್ ಯಡಿಯೂರಪ್ಪ
ಬೆಂಗಳೂರು: ವಿಧಾನಸಭೆ ಚುನಾವಣೆಯೇ ಇನ್ನೂ ಮುಗಿದಿಲ್ಲ. ಯಾರು ಗೆಲ್ಲುತ್ತಾರೆ ಎಂಬುದೇ ಇನ್ನೂ ಗೊತ್ತಾಗಿಲ್ಲ. ಅದಕ್ಕಿಂತ ಮೊದಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಪ್ರಮಾಣವಚನದ ಬಗ್ಗೆ ಮಾತನಾಡಲು ಶುರು ಮಾಡಿದ್ದಾರೆ!

ತಾವೇ ಗೆದ್ದು ಅಧಿಕಾರಕ್ಕೆ ಬರುವುವೆಂಬ ಅತಿಯಾದ ಆತ್ಮವಿಶ್ವಾಸದಲ್ಲಿರುವ ಯಡಿಯೂರಪ್ಪ ಪ್ರಧಾನಿ ಮೋದಿ ಭವಿಷ್ಯ ನುಡಿಯ ಪ್ರಕಾರ 17 ಅಥವಾ 18 ಕ್ಕೆ ತಾವು ಪ್ರಮಾಣ ವಚನ ಸ್ವೀಕರಿಸುವುದಾಗಿ ಹೇಳಿಕೊಂಡಿದ್ದಾರೆ!

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೇರಲಿದೆ. ನಮಗೆ ಜೆಡಿಎಸ್ ಪಕ್ಷದ ಸಹಾಯ ಬೇಕಾಗಿ ಬರಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನು ವಿಶ್ವಾಸ ಎನ್ನಬೇಕೋ, ಅತಿಯಾದ ವಿಶ್ವಾಸ ಎನ್ನಬೇಕೋ ನೀವೇ ಹೇಳಿ!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ನಮ್ಮ ಕುಟುಂಬದಿಂದ ಕುಮಾರಸ್ವಾಮಿಗೆ ಬಹಿಷ್ಕಾರ: ದೇವೇಗೌಡರ ಪ್ರತಿಜ್ಞೆ!