ಡಿಕೆ ಶಿವಕುಮಾರ್ ಹೇಳಿಕೆಗೆ ಅಚ್ಚರಿಯ ಪ್ರತಿಕ್ರಿಯೆ ನೀಡಿದ ಬಿಎಸ್ ಯಡಿಯೂರಪ್ಪ

Webdunia
ಶನಿವಾರ, 20 ಅಕ್ಟೋಬರ್ 2018 (09:55 IST)
ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮ ಮಾಡಲು ಹೊರಟೇ ತಮ್ಮ ಹಿಂದಿನ ಸರ್ಕಾರ ತಪ್ಪು ಮಾಡಿತು ಎಂದು ಸಚಿವ ಡಿಕೆ ಶಿವಕುಮಾರ್ ನೀಡಿದ್ದ ಹೇಳಿಕೆಗೆ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಅಚ್ಚರಿಯ ಪ್ರತಿಕ್ರಿಯೆ ನೀಡಿದ್ದಾರೆ.

‘ಬೀದರ್ ನ ಐದು ಶಾಸಕರಲ್ಲಿ ನಾಲ್ವರೂ ಕಾಂಗ್ರೆಸ್ ನವರೇ. ಹೀಗಾಗಿ ಈ ಕಾರಣಕ್ಕೆ ಇಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸಿತು ಎಂದರೆ ಒಪ್ಪುವ ಮಾತಲ್ಲ. ಕಾಂಗ್ರೆಸ್ ಸೋಲಿಗೆ ಬೇರೆಯದೇ ಕಾರಣಗಳಿವೆ. ಡಿಕೆಶಿ ಹೇಳಿಕೆಯೇ ವಿಚಿತ್ರವಾಗಿದೆ’ ಎಂದು ಯಡಿಯೂರಪ್ಪ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನೊಂದೆಡೆ ಪ್ರತ್ಯೇಕ ಧರ್ಮ ಹೋರಾಟದ ಮುಂಚೂಣಿ ವಹಿಸಿದ್ದ ಶಾಸಕ ಎಂಬಿ ಪಾಟೀಲ್ ಡಿಕೆಶಿ ಎಲ್ಲಾ ವಿಚಾರದಲ್ಲೂ ಹಸ್ತಕ್ಷೇಪ ಮಾಡುತ್ತಿದ್ದಾರೆ. ಅವರು ರಾಹುಲ್ ಗಾಂಧಿಗಿಂತ ದೊಡ್ಡವರಲ್ಲ. ಈ ಬಗ್ಗೆ ಹೈಕಮಾಂಡ್ ಗೆ ವರದಿ ನೀಡುವೆ ಎಂದು ಕಿಡಿ ಕಾರಿದ್ದಾರೆ. ಅಂತೂ ಸುಖಾಸುಮ್ಮನೇ ಡಿಕೆಶಿ ವಿವಾದವೊಂದನ್ನು ಮೈಮೇಲೆಳೆದುಕೊಂಡಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದೂ ಈ ಜಿಲ್ಲೆಗಳಿಗೆ ಮಳೆಯ ಸೂಚನೆ

ಉಗ್ರರ ಕುರಿತ ಪುಸ್ತಕ ಬಿಡುಗಡೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

ತಳವಾರ ಸಮುದಾಯಕ್ಕೆ ಎಸ್‍ಟಿ ಪ್ರಮಾಣಪತ್ರ ನೀಡಲು ಎನ್.ರವಿಕುಮಾರ್ ಆಗ್ರಹ

Exit Poll result: ನಾಲ್ಕು ರಾಜ್ಯಗಳ ಚುನಾವಣೆ ಎಕ್ಸಿಟ್ ಪೋಲ್ ಫಲಿತಾಂಶ ಏನು ಹೇಳುತ್ತದೆ

ಸಿಎಂ ಕುರ್ಚಿ ಕಿತ್ತಾಟದ ನಡುವೆ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments