Webdunia - Bharat's app for daily news and videos

Install App

ಇಂದು ಸಂಜೆ 4 ಗಂಟೆಗೆ ದೇವೇಗೌಡರ ಕುಟುಂಬದ ಹಗರಣ ಬಯಲು ಮಾಡುತ್ತಾರಂತೆ ಯಡಿಯೂರಪ್ಪ!

Webdunia
ಗುರುವಾರ, 20 ಸೆಪ್ಟಂಬರ್ 2018 (13:07 IST)
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ರಾಜಕೀಯ ಪಕ್ಷಗಳ ನಡುವಿನ ಏಟು-ಎದಿರೇಟು ಮುಂದುವರಿದಿದ್ದು ಇಂದು ಸಂಜೆ 4 ಗಂಟೆಗೆ ದೇವೇಗೌಡರ ಕುಟುಂಬದ ಹಗರಣ ಬಯಲು ಮಾಡಲು ಬಿಜೆಪಿ ಸಿದ್ಧತೆ ನಡೆಸಿದೆ.

ಯಡಿಯೂರಪ್ಪ ವಿರುದ್ಧ ಸಿಎಂ ಕುಮಾರಸ್ವಾಮಿ ಏಟಿಗೆ ಎದಿರೇಟು ನೀಡಿರುವ ಯಡಿಯೂರಪ್ಪ ‘ನನಗೆ ಏನು ಮಾತನಾಡಬೇಕೆಂದು ಗೊತ್ತಿದೆ. ನನ್ನ ವಿರುದ್ಧ ಯಾವುದೇ ತನಿಖೆಗೆ ನಾನು ಬಗ್ಗುವನಲ್ಲ. ಇಂದು ಸಂಜೆ 4 ಗಂಟೆಗೆ ನಮ್ಮ ಪಕ್ಷದ ನಾಯಕರು ದೇವೇಗೌಡರ ಕುಟುಂಬದ ಭೂಹಗರಣಗಳ ಮಾಹಿತಿಯನ್ನು ದಾಖಲೆ ಸಮೇತ ಬಯಲು ಮಾಡುತ್ತೇವೆ. ಮೈಸೂರಿನಲ್ಲಿ ಭೂಕಬಳಿಕೆ ಮಾಡಿ ನಿಮ್ಮ ಕುಟುಂಬದವರಿಗೆಲ್ಲಾ ಹಂಚಿದ್ದು ನಮಗೂ ಗೊತ್ತಿದೆ’ ಎಂದು ಯಡಿಯೂರಪ್ಪ ಹೇಳಿದ್ದಾರೆ.

‘ರಾಜ್ಯದಲ್ಲಿ ನಿಮ್ಮ ಸರ್ಕಾರವಿರಬಹುದು. ಆದರೆ ಕೇಂದ್ರದಲ್ಲಿ ನಮ್ಮ ನರೇಂದ್ರ ಮೋದಿ ನೇತೃತ್ವದ ಸರ್ಕಾರವಿದೆ. ನೀವು ಏನು ಮಾಡಿದರೂ ಅದಕ್ಕೆ ಏನು ಮಾಡಬೇಕೆಂದು ನಮಗೂ ಗೊತ್ತಿದೆ’ ಎಂದು ಜಿದ್ದಾಜಿದ್ದಿನ ಮಾತನಾಡಿದ್ದಾರೆ. ಹೀಗಾಗಿ ಇಂದು ಸಂಜೆ ಬಿಜೆಪಿ ಹೊರ ಹಾಕಲಿರುವ ಮಾಹಿತಿಗಳ ಬಗ್ಗೆ ಕುತೂಹಲ ಮೂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments