Webdunia - Bharat's app for daily news and videos

Install App

ಇಂದು ಸಂಜೆ 4 ಗಂಟೆಗೆ ದೇವೇಗೌಡರ ಕುಟುಂಬದ ಹಗರಣ ಬಯಲು ಮಾಡುತ್ತಾರಂತೆ ಯಡಿಯೂರಪ್ಪ!

Webdunia
ಗುರುವಾರ, 20 ಸೆಪ್ಟಂಬರ್ 2018 (13:07 IST)
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ರಾಜಕೀಯ ಪಕ್ಷಗಳ ನಡುವಿನ ಏಟು-ಎದಿರೇಟು ಮುಂದುವರಿದಿದ್ದು ಇಂದು ಸಂಜೆ 4 ಗಂಟೆಗೆ ದೇವೇಗೌಡರ ಕುಟುಂಬದ ಹಗರಣ ಬಯಲು ಮಾಡಲು ಬಿಜೆಪಿ ಸಿದ್ಧತೆ ನಡೆಸಿದೆ.

ಯಡಿಯೂರಪ್ಪ ವಿರುದ್ಧ ಸಿಎಂ ಕುಮಾರಸ್ವಾಮಿ ಏಟಿಗೆ ಎದಿರೇಟು ನೀಡಿರುವ ಯಡಿಯೂರಪ್ಪ ‘ನನಗೆ ಏನು ಮಾತನಾಡಬೇಕೆಂದು ಗೊತ್ತಿದೆ. ನನ್ನ ವಿರುದ್ಧ ಯಾವುದೇ ತನಿಖೆಗೆ ನಾನು ಬಗ್ಗುವನಲ್ಲ. ಇಂದು ಸಂಜೆ 4 ಗಂಟೆಗೆ ನಮ್ಮ ಪಕ್ಷದ ನಾಯಕರು ದೇವೇಗೌಡರ ಕುಟುಂಬದ ಭೂಹಗರಣಗಳ ಮಾಹಿತಿಯನ್ನು ದಾಖಲೆ ಸಮೇತ ಬಯಲು ಮಾಡುತ್ತೇವೆ. ಮೈಸೂರಿನಲ್ಲಿ ಭೂಕಬಳಿಕೆ ಮಾಡಿ ನಿಮ್ಮ ಕುಟುಂಬದವರಿಗೆಲ್ಲಾ ಹಂಚಿದ್ದು ನಮಗೂ ಗೊತ್ತಿದೆ’ ಎಂದು ಯಡಿಯೂರಪ್ಪ ಹೇಳಿದ್ದಾರೆ.

‘ರಾಜ್ಯದಲ್ಲಿ ನಿಮ್ಮ ಸರ್ಕಾರವಿರಬಹುದು. ಆದರೆ ಕೇಂದ್ರದಲ್ಲಿ ನಮ್ಮ ನರೇಂದ್ರ ಮೋದಿ ನೇತೃತ್ವದ ಸರ್ಕಾರವಿದೆ. ನೀವು ಏನು ಮಾಡಿದರೂ ಅದಕ್ಕೆ ಏನು ಮಾಡಬೇಕೆಂದು ನಮಗೂ ಗೊತ್ತಿದೆ’ ಎಂದು ಜಿದ್ದಾಜಿದ್ದಿನ ಮಾತನಾಡಿದ್ದಾರೆ. ಹೀಗಾಗಿ ಇಂದು ಸಂಜೆ ಬಿಜೆಪಿ ಹೊರ ಹಾಕಲಿರುವ ಮಾಹಿತಿಗಳ ಬಗ್ಗೆ ಕುತೂಹಲ ಮೂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments