Select Your Language

Notifications

webdunia
webdunia
webdunia
webdunia

‘ಕಾಂಗ್ರೆಸ್ ನವರು ಹೇಳಿದ್ದಕ್ಕೇ ಗೋವಾ ಸಿಎಂ ಜತೆ ಮಾತುಕತೆ ನಡೆಸಿದ್ದೆ’

‘ಕಾಂಗ್ರೆಸ್ ನವರು ಹೇಳಿದ್ದಕ್ಕೇ ಗೋವಾ ಸಿಎಂ ಜತೆ ಮಾತುಕತೆ ನಡೆಸಿದ್ದೆ’
ಬೆಂಗಳೂರು , ಶನಿವಾರ, 23 ಡಿಸೆಂಬರ್ 2017 (11:17 IST)
ಬೆಂಗಳೂರು: ಮಹದಾಯಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಗೋವಾ ಸಿಎಂ ಮನೋಹರ್ ಪರಿಕ್ಕರ್ ಜತೆ ಮಾತುಕತೆ ಫಲಪ್ರದವಾದ ಮೇಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕಾಂಗ್ರೆಸ್ ಮೇಲೆ ಹರಿಹಾಯ್ದಿದ್ದಾರೆ.
 

ಹಿಂದಿನ ಪ್ರಧಾನಿ ಮನಮೋಹನ್ ಸಿಂಗ್ ಯಾಕೆ ಈ ವಿವಾದ ಬಗೆಹರಿಸುವ ಯತ್ನ ನಡೆಸಿಲ್ಲ ಎಂದು ಬಿಎಸ್ ವೈ ಪ್ರಶ್ನಿಸಿದ್ದಾರೆ. ಈಗ ಬಿಜೆಪಿ ನಾಯಕರು ಮಾತುಕತೆ ನಡೆಸಿದ್ದಕ್ಕದೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕರ ಮೇಲೆ ಬಿಸ್ ವೈ ಕಿಡಿಕಾರಿದ್ದಾರೆ.  ಕಾಂಗ್ರೆಸ್ ನವರು ಹೇಳಿದ್ದಕ್ಕೇ ಗೋವಾ ಸಿಎಂ ಜತೆ ಮಾತುಕತೆ ನಡೆಸಿದ್ದೆ ಎಂದೂ ಅವರು ಹೇಳಿದ್ದಾರೆ.

ಮಹದಾಯಿ ಜಲ ವಿವಾದ ವಿಚಾರದಲ್ಲಿ ಗೋವಾ ಕಾಂಗ್ರೆಸಿಗರ ವಿರೋಧವಿದೆ. ಹೀಗಾಗಿ ಗೋವಾ ಕಾಂಗ್ರೆಸ್ ನಾಯಕರ ಜತೆ ಇಲ್ಲಿನ ನಾಯಕರು ಮಾತುಕತೆ ನಡೆಸಲಿ. ಕಾಂಗ್ರೆಸ್ ನಾಯಕರ ವಿರೋಧಕ್ಕೆ ಕಾಂಗ್ರೆಸ್ ಹೈಕಮಾಂಡ್ ಕುಮ್ಮಕ್ಕು ಇದೆ ಎಂದೂ ಬಿಎಸ್ ವೈ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಬಿಡುಗಡೆಯಾಗಲಿರುವ ಮಾಜಿ ಪ್ರಧಾನಿ ದೇವೇಗೌಡರ ಕುರಿತ ಪುಸ್ತಕದಲ್ಲಿ ಏನೇನಿದೆ ಗೊತ್ತಾ…?