Webdunia - Bharat's app for daily news and videos

Install App

ಶ್ರೀರಾಮುಲು ವಿರುದ್ಧ 420 ಪ್ರಯೋಗಿಸಿದ ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಬಿಎಸ್ ವೈ

Webdunia
ಬುಧವಾರ, 24 ಅಕ್ಟೋಬರ್ 2018 (10:32 IST)
ಬೆಂಗಳೂರು: ಬಳ್ಳಾರಿ ಲೋಕಸಭೆ ಉಪಚುನಾವಣೆಯ ವಾಕ್ಸಮರ ಜೋರಾಗಿದ್ದು, ಶ್ರೀರಾಮುಲು ವಿರುದ್ಧ 420 ಪದ ಪ್ರಯೋಗ ನಡೆಸಿದ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ಪ್ರಚಾರ ಭರಾಟೆಯಲ್ಲಿ ಸಿದ್ದರಾಮಯ್ಯ ಈ ರೀತಿ ಮಾತನಾಡಿದ್ದಾರೆ. ಶ್ರೀರಾಮುಲು ಮೇಲೆ ಈ ರೀತಿ ಮಾತನಾಡುವ ಮೂಲಕ ವಾಲ್ಮೀಕಿ ಸಮುದಾಯವನ್ನು ಅವಮಾನಿಸಿದ್ದಾರೆ. ಕೂಡಲೇ ಸಿದ್ದರಾಮಯ್ಯ ವಾಲ್ಮೀಕಿ ಸಮುದಾಯದ ಕ್ಷಮೆ ಯಾಚಿಸಬೇಕು ಎಂದು ಬಿಎಸ್ ವೈ ಆಗ್ರಹಿಸಿದ್ದಾರೆ.

ಇನ್ನು ಸಿಎಂ ಕುಮಾರಸ್ವಾಮಿ ವಿರುದ್ಧವೂ ವಾಗ್ದಾಳಿ ನಡೆಸಿದ ಬಿಎಸ್ ವೈ ಮೊದಲು ನಿಮ್ಮ ಅಭ್ಯರ್ಥಿ ಯಾರು ಎಂದು ಮೊದಲು ಹೇಳಿ. ಒಬ್ಬರು ರಾಹುಲ್ ಗಾಂಧಿ ಅಂತಾರೆ, ಇನ್ನೊಬ್ಬರು ಚಿದಂಬರಂ ಅಂತಾರೆ. ಆದರೆ ಎಲ್ಲಾ ಸಮೀಕ್ಷೆಗಳಲ್ಲಿ ಮೋದಿಯೇ ಪ್ರಧಾನಿ ಅಂತ ವರದಿ ಬಂದಿದೆ. ಹೀಗಾಗಿ ನಿಮ್ಮ ಪ್ರಧಾನಿ ಅಭ್ಯರ್ಥಿ ಯಾರು ಎಂಬ ಬಗ್ಗೆ ಮೊದಲು ಸ್ಪಷ್ಟನೆ ನೀಡಲಿ ಎಂದು ಬಿಎಸ್ ವೈ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments