Publish Date: Tue, 14 Nov 2017 (10:19 IST)
Updated Date: Tue, 14 Nov 2017 (10:21 IST)
ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಶೇಷ ಅಧಿವೇಶನಕ್ಕೆ ಸಚಿವರು ಮತ್ತು ಶಾಸಕರು ಗೈರಾಗಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸರ್ಕಾರವನ್ನು ಟೀಕಿಸಿದ್ದಾರೆ.
ಅಧಿವೇಶನಕ್ಕೆ ಸಚಿವರು ಗೈರಾಗಿರುವದನ್ನು ನೋಡಿದರೇ ಗೊತ್ತಾಗತ್ತದೆ, ರಾಜ್ಯ ಸರ್ಕಾರಕ್ಕೆ ಜನರ ಪರ ಎಷ್ಟು ಕಾಳಜಿ ಇದೆ ಎಂದು ಎಂದು ಯಡಿಯೂರಪ್ಪ ಲೇವಡಿ ಮಾಡಿದ್ದಾರೆ. ಮುರುಡೇಶ್ವರಕ್ಕೆ ಭೇಟಿ ನೀಡಿರುವ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿದರು.
ಇದೇ ವೇಳೆ ಖಾಸಗಿ ವೈದ್ಯರ ಜತೆ ಕೂತು ಚರ್ಚಿಸಿ ಪ್ರತಿಭಟನೆ ಕೈಬಿಡಲು ಮನ ಒಲಿಸುವ ಬದಲು ಸಿಎಂ ಸಿದ್ದರಾಮಯ್ಯ ವೈದ್ಯರ ಜತೆ ಕಣ್ಣಾ ಮುಚ್ಚಾಲೆ ಆಡುತ್ತಿದ್ದಾರೆ ಎಂದೂ ಯಡಿಯೂರಪ್ಪ ಟೀಕಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ