Webdunia - Bharat's app for daily news and videos

Install App

ಬಿಎಸ್‌ವೈ, ಶೋಭಾ ಕರಂದ್ಲಾಜೆರಿಂದ ಪಶ್ಚಾತಾಪದ ಯಾತ್ರೆ: ಸಿಎಂ ವ್ಯಂಗ್ಯ

Webdunia
ಭಾನುವಾರ, 19 ನವೆಂಬರ್ 2017 (14:06 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಸಂಸದೆ ಶೋಭಾ ಕರಂದ್ಲಾಜೆ ಮಾಡಬಾರದ ತಪ್ಪುಗಳನ್ನು ಮಾಡಿ ಈಗ ಪಶ್ಚಾತ್ತಾಪ ಯಾತ್ರೆ ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕರನ್ನು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಸಾಗುತ್ತಿರುವುದು ಬಿಜೆಪಿಯ ನವಕರ್ನಾಟಕ ಪರಿವರ್ತನಾ ಯಾತ್ರೆ ಯಲ್ಲ. ಯಡಿಯೂರಪ್ಪ ಹಾಗೂ ಶೋಭಾ ಕರಂದ್ಲಾಜೆಯ ಪಶ್ಚಾತ್ತಾಪದ ಯಾತ್ರೆ ಎಂದು ವ್ಯಂಗ್ಯವಾಡಿದರು.
 
ರಾಜ್ಯ ಸರಕಾರ ರೈತರ ಸಾಲ ಮನ್ನಾ ಮಾಡಿದಲ್ಲಿ ಕೇಂದ್ರ ಸರಕಾರದಿಂದ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ಸಾಲ ಮನ್ನಾ ಮಾಡಾಸುತ್ತೇವೆ ಎಂದಿದ್ದ ಯಡಿಯೂರಪ್ಪ, ಇದೀಗ ಪ್ರಧಾನಿ ಮೋದಿ ಬಳಿ ತೆರಳಿ ರೈತರ ಸಾಲ ಮನ್ನಾ ಮಾಡಿಸಲಿ ಎಂದು ಗುಡುಗಿದರು.
 
ಪ್ರಧಾನಿ ಮೋದಿಯಿಂದ ದೇಶದ ಬಡವರಿಗೆ, ರೈತರಿಗೆ, ಶೋಷಿತರಿಗೆ, ಆರ್ಥಿಕವಾಗಿ ದುರ್ಬಲರಾದವರಿಗೆ ಅಚ್ಚೇದಿನ್ ಬರಲಿಲ್ಲ. ಆದರೆ, ಬಿಜೆಪಿ ಮುಖಂಡರಿಗೆ ಮಾತ್ರ ಅಚ್ಚೇ ದಿನ್ ಬಂದಿದೆ ಎಂದು ವಾಗ್ದಾಳಿ ನಡೆಸಿದರು.
 
ಬಿಜೆಪಿ ಯಾವ ಉದ್ದೇಶಕ್ಕಾಗಿ ಪರಿವರ್ತನಾ ಯಾತ್ರೆ ಮಾಡುತ್ತಿದೆ. ಪರಿವರ್ತನೆಯಾಗಬೇಕಾಗಿರುವುದು ಬಿಜೆಪಿ ನಾಯಕರಲ್ಲಿ. ಬಿಜೆಪಿಯವರು ಕೋಮುವಾದವನ್ನು ತೊರೆದು ಜಾತ್ಯಾತೀತವಾದವನ್ನು ಅಳವಡಿಸಿಕೊಳ್ಳಲಿ. ರಾಜ್ಯದಲ್ಲಿರುವ ಪ್ರತಿಯೊಂದು ಸಮುದಾಯದ ಅಭಿವೃದ್ಧಿಗೆ ಶ್ರಮಿಸುವತ್ತ ಪರಿವರ್ತನೆ ಮಾಡಿಕೊಳ್ಳಲಿ ಎಂದು ಕಿವಿಮಾತು ಹೇಳಿದರು.
 
ರಾಜ್ಯದ ಮುಖ್ಯಮಂತ್ರಿಯೊಬ್ಬರ ಬಗ್ಗೆ ಕೀಳಾಗಿ ಮಾತನಾಡುವ ಕೇಂದ್ರ ಸಚಿವ ಅನಂತಕುಮಾರ ಹೆಗಡೆಗೆ ನೈತಿಕತೆಯಿದೆಯಾ? ದೇಶದ ಇತಿಹಾಸ ಅವನಿಗೆ ಗೊತ್ತಿದೆಯಾ? ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Ramalinga Reddy: ಬಿಜೆಪಿಯವರ ಮೇಲೆ ಯಾಕೆ ಐಟಿ, ಇಡಿ ದಾಳಿ ಆಗಲ್ಲ: ರಾಮಲಿಂಗಾ ರೆಡ್ಡಿ

ಸಿಎಂ ಸಿದ್ದರಾಮಯ್ಯ ಔಟ್ ಗೋಯಿಂಗ್ ವ್ಯಕ್ತಿ: ಅವರ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದ ಅಶೋಕ್‌

Pradeep Eshwar: ಚಕ್ರವರ್ತಿ ಸೂಲಿಬೆಲೆ ಎಲ್ಲ ನನ್ನ ಲೆವೆಲ್ ನಲ್ಲಿಲ್ಲ, ನನ್ನ ಲೆವೆಲ್ಲೇ ಬೇರೆ: ಪ್ರದೀಪ್ ಈಶ್ವರ್

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮುಂದಿನ ಸುದ್ದಿ
Show comments