Select Your Language

Notifications

webdunia
webdunia
webdunia
webdunia

ಮಹಾದಾಯಿ ವಿಚಾರದಲ್ಲಿ ಸುಳ್ಳು ಹೇಳಿದ ಬಿಎಸ್‌ವೈ ಕ್ಷಮೆ ಕೇಳಲಿ– ಗುಂಡೂರಾವ್

ಮಹಾದಾಯಿ ವಿಚಾರದಲ್ಲಿ ಸುಳ್ಳು ಹೇಳಿದ ಬಿಎಸ್‌ವೈ ಕ್ಷಮೆ ಕೇಳಲಿ– ಗುಂಡೂರಾವ್
ಬೆಂಗಳೂರು , ಶುಕ್ರವಾರ, 12 ಜನವರಿ 2018 (14:48 IST)
ಮಹಾದಾಯಿ ವಿವಾದ ಬಗೆಹರಿಸುವುದಾಗಿ ಸುಳ್ಳು ಹೇಳಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜ್ಯದ ಜನತೆಯ ಕ್ಷಮೆ ಕೋರಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್ ಒತ್ತಾಯಿಸಿದ್ದಾರೆ.
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನರಗುಂದ ನವಲಗುಂದ ರೈತರ ಬಳಿ ಹೋಗಿ ಯಡಿಯೂರಪ್ಪ ನೀರಿನ ವಿಷಯದಲ್ಲಿ ರಾಜಕೀಯ ಮಾಡುವುದಿಲ್ಲ ಎಂದು ಕ್ಷಮೆ ಕೇಳಬೇಕು ಎಂದು ತಿಳಿಸಿದ್ದಾರೆ.
 
ಪಿಎಫ್ಐ, ಎಸ್‌ಟಿಪಿಐ ಸಂಘಟನೆಗಳನ್ನು ನಿಷೇಧ ಮಾಡಬೇಕೆಂದರೆ, ಬಿಜೆಪಿಯವರು ಪ್ರಧಾನಿ ಬಳಿಗೆ ಹೋಗಿ ಒತ್ತಾಯ ಮಾಡಬೇಕು. ಬಿಜೆಪಿಯವರು ರಾಜ್ಯದಲ್ಲಿ ಗಲಾಟೆ ಮಾಡುತ್ತಿರುವುದರಿಂದ ರಾಜ್ಯದಲ್ಲಿ ಭಯದ ವಾತಾವರಣ ಉಂಟಾಗಿದೆ ಎಂದು ದೂರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬಿಎಸ್‌ವೈ, ಜೋಷಿ, ಶೆಟ್ಟರ್ ರಾಜೀನಾಮೆ ನೀಡಲಿ– ಎಚ್.ಕೆ.ಪಾಟೀಲ್