Webdunia - Bharat's app for daily news and videos

Install App

ಬಿಜೆಪಿಗೆ ಬಿಎಸ್ ಪಿ ಶಾಸಕ ಎನ್. ಮಹೇಶ್ ಸೇರ್ಪಡೆ

Webdunia
ಗುರುವಾರ, 5 ಆಗಸ್ಟ್ 2021 (14:50 IST)
ಬೆಂಗಳೂರಿನ ಮಲ್ಲೇಶ್ವರದಲ್ಲಿನ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಸರಳ ಸಮಾರಂಭದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಎನ್. ಮಹೇಶ್ ಬಿಜೆಪಿಗೆ ಸೇರ್ಪಡೆಯಾದರು. ಮಹೇಶ್ ಅವರಿಗೆ ಪಕ್ಷದ ಶಾಲು ಹೊದಿಸುವ ಮೂಲಕ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಮಹೇಶ್ ಚಳುವಳಿಯ ಹಿನ್ನೆಲೆಯಿಂದ  ಬಂದವರು. ಅವರ ಸಂಘಟನಾ ಶಕ್ತಿ ಬಹು ದೊಡ್ಡದು. ಅವರು ಶಾಸಕರಾಗುವ ಮುನ್ನವೇ ದಲಿತರ ಹೃದಯ ಗೆದ್ದವರು. ಕೊಳ್ಳೆಗಾಲದ ಎಲ್ಲ ಜನಾಂಗ ಅವರನ್ನ ಆರಿಸಿದೆ ಎಂದರು.
ನಮ ಪಕ್ಷದ ಸಿದ್ಧಾಂತ ಮನವರಿಕೆಯಾದ ಮೇಲೆ ಮಹೇಶ್ ಪಕ್ಷಕ್ಕೆ ಬಂದಿದ್ದಾರೆ. ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಸ್ವಯಂ ಪ್ರೇರಣೆಯಿಂದ ಸರಕಾರಕ್ಕೆ ಬೆಂಬಲ ನೀಡಿದ್ದರು. ಈ ಹಿಂದೆ ಯಡಿಯೂರಪ್ಪನವರಿಗೆ ಸಹಕಾರ ಕೊಟ್ಟಿದ್ದರು. ಇಂದು ಅವರು ನಮ್ಮ ಪಕ್ಷಕ್ಕೆ ಬರುತ್ತಿದ್ದಾರೆ. ಅವರ ಸೇವೆಯನ್ನ ಪಕ್ಷ ಬಳಸಿಕೊಳ್ಳಲಿದೆ ಎಂದು ಅವರು ಹೇಳಿದರು.
ವಿಜಯೇಂದ್ರ ಮೈಸೂರು ಭಾಗದಲ್ಲಿ ಸುತ್ತಾಡಿದ್ದಾರೆ. ಅವರ ಶ್ರಮಕ್ಕೆ ಮಹೇಶ್ ಶಕ್ತಿ ಸೇರಿದರೆ ಬಲ. ಬಿಜೆಪಿಗೆ ಮತ್ತಷ್ಟು ಬಲ ಬಂದಂತಾಗಿದೆ. ಆ ಭಾಗದಲ್ಲಿ ಸಾಮರಸ್ಯದ ಅನ್ಯೋನ್ಯತೆ ಸ್ಥಾಪನೆಯಾಗಲಿದೆ. ಈಗ ಹೊಸ ಸರ್ಕಾರ ಬಂದಿದೆ. ಈ ವೇಳೆಯೇ ಈ ಸಂದೇಶವೂ ಸೇರಿಕೊಂಡಿದೆ ಎಂದು ಬೊಮ್ಮಾಯಿ ನುಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಪಾದಯಾತ್ರೆ ಬಗ್ಗೆ ಬಿಜೆಪಿಯಲ್ಲೇ ಭಿನ್ನಾಭಿಪ್ರಾಯ

ಇಸ್ಲಾಂ ಅತ್ಯಂತ ಶ್ರೇಷ್ಠ ಧರ್ಮ, ಆದರೆ ತಪ್ಪು ಹರಡಲಾಗುತ್ತಿದೆ, ನನಗೆ ಹಜ್ ಗೆ ಹೋಗಬೇಕೆಂದಿದೆ: ಬಸವರಾಜ ರಾಯರೆಡ್ಡಿ

ಆನ್‌ಲೈನ್‌ನಲ್ಲಿ ಮಗಳ ಮದುವೆ ನೋಡಿ ಕಣ್ಣೀರಿಟ್ಟ ಹೆತ್ತವರು: Video

ಕರ್ನಾಟಕ ಉದ್ಯಾನವನ ತಿದ್ದುಪಡಿ ಕಾಯ್ದೆ ವಿರುದ್ಧ ಲಾಲ್ ಬಾಗ್‌ನಲ್ಲಿ ಬೃಹತ್ ಪ್ರತಿಭಟನೆ

ನಂಜೊತೆ ಬನ್ನಿ ಎಂದು ಮಹಿಳೆಯನ್ನು ಕರೆದೊಯ್ದ ಬೀದಿ ನಾಯಿ: ಕೊನೆಗೆ ತೋರಿಸಿದ್ದು ಏನು, ನಿಜಕ್ಕೂ ಅಚ್ಚರಿ Video

ಮುಂದಿನ ಸುದ್ದಿ
Show comments