Webdunia - Bharat's app for daily news and videos

Install App

ಬಿಎಸ್‌ವೈ, ಎಚ್‌ಡಿಕೆ, ನಿಮ್ಮಪ್ಪನ ಆಣೆಗೂ ನೀವು ಮತ್ತೆ ಸಿಎಂ ಆಗೋಲ್ಲ: ಸಿಎಂ

Webdunia
ಮಂಗಳವಾರ, 11 ಜುಲೈ 2017 (15:46 IST)
ಮುಂದಿನ ಬಾರಿಯೂ ಕಾಂಗ್ರೆಸ್ ಪಕ್ಷವೇ ಅಧಿಕಾರ ನಡೆಸಲಿದೆ ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಮುಂದಿನ ಬಾರಿ ಯಡಿಯೂರಪ್ಪ, ಕುಮಾರಸ್ವಾಮಿ ನಾನೇ ಸಿಎಂ ಎನ್ನುತ್ತಿದ್ದಾರೆ. ಕುಮಾರಸ್ವಾಮಿ, ಯಡಿಯೂರಪ್ಪನವರೇ ಇಂತಹ ಭ್ರಮೆಯಲ್ಲಿ ತೇಲಾಡಬೇಡಿ. ನಿಮ್ಮಪ್ಪನ ಆಣೆಗೂ ನೀವಿಬ್ಬರು ಸಿಎಂ ಆಗುವುದಿಲ್ಲ ಎಂದು ಲೇವಡಿ ಮಾಡಿದ್ದಾರೆ. 
 
ಯಡಿಯೂರಪ್ಪ ಅವರದು ಕೇವಲ ಢೋಂಗಿ ದಲಿತ ಪ್ರೀತಿ. ಬಸವೇಶ್ವರರ ಹೆಸರು ಹೇಳಿಕೊಂಡು ಓಡಾಡಲು ನಾಚಿಕೆಯಾಗೋಲ್ವಾ? ದಲಿತರ ಮನೆಯಲ್ಲಿ ಹೋಟೆಲ್ ದೋಸೆ ತಿಂದ್ರೆ ಸಮಾನತೆ ಬರುತ್ತಾ? ಎಂದು ವಾಗ್ದಾಳಿ ನಡೆಸಿದರು.
 
ದಲಿತರ ಮನೆಗೆ ಹೋಗಿ ತಿಂಡಿ ತಿನ್ನುವ ನಾಟಕ ಬಿಡಿ. ನೀವು ಎಂತಹ ನಾಟಕವಾಡಿದರೂ ಮುಂದಿನ ಬಾರಿಯೂ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments