Select Your Language

Notifications

webdunia
webdunia
webdunia
webdunia

ಬಿಎಸ್‌ವೈ ಏನ್ ಇನ್‌ಕಂ ಟ್ಯಾಕ್ಸ್‌ನವರ ಏಜೆಂಟಾ: ಸಿಎಂ ಸಿದ್ದರಾಮಯ್ಯ ಕಿಡಿ

ಬಿಎಸ್‌ವೈ ಏನ್  ಇನ್‌ಕಂ ಟ್ಯಾಕ್ಸ್‌ನವರ ಏಜೆಂಟಾ: ಸಿಎಂ ಸಿದ್ದರಾಮಯ್ಯ ಕಿಡಿ
ಬೆಂಗಳೂರು , ಶುಕ್ರವಾರ, 23 ಡಿಸೆಂಬರ್ 2016 (13:16 IST)
ಮೈಸೂರಿನ ನಂಜನಗೂಡು ಚುನಾವಣೆಯಲ್ಲಿ ಆದಾಯ ತೆರಿಗೆ ವಂಚಕ ಸುನೀಲ್ ಭೋಸ್ ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ಬಿಎಸ್‌ವೈಇನ್‌ಕಂ ಟ್ಯಾಕ್ಸ್‌ನವರ ಏಜೆಂಟಾ ಎಂದು ಗುಡುಗಿದ್ದಾರೆ.
 
ಯಡಿಯೂರಪ್ಪನವರಿಗೆ ದಿವ್ಯ ಜ್ಞಾನ ಇದೆಯಾ? ಅವರ ಬಳಿ ಯಾರಾದರೂ ತೆರಿಗೆ ವಂಚಿಸಿದ್ದಾರೆ ಎನ್ನುವ ದಾಖಲೆಗಳಿದ್ದಲ್ಲಿ ಕೊಡಲಿ. ಅದನ್ನು ಬಿಟ್ಟು ಹಿಟ್ ಆಂಡ್ ರನ್ ಕೇಸ್ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.
 
ನಂಜನಗೂಡು ಉಪಚುನಾವಣೆಯಲ್ಲಿ ಸಚಿವ ಮಹದೇವಪ್ಪ ಪುತ್ರ ಸುನೀಲ್ ಭೋಸ್ ಸ್ಪರ್ಧಿಸಲ್ಲ ಎಂದು ಭವಿಷ್ಯ ನುಡಿದಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಮ್ಮ ಪಕ್ಷದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಬಿಎಸ್‌ವೈಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು. 
 
ದೇವೇಗೌಡರಿಗೆ ತಿರುಗೇಟು............
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ ಎಂದು ನಾನು ಸತ್ಯ ಹೇಳಿದ್ದೇನೆ. ಈ ಸತ್ಯ ಜೆಡಿಎಸ್ ನಾಯಕರಿಗೂ ಗೊತ್ತು. ಈ ಹಿಂದೆ ನಾವೇಲ್ಲ ಜೆಡಿಎಸ್ ಪಕ್ಷದಲ್ಲಿದ್ದಾಗಲೇ ಅಧಿಕಾರಕ್ಕೆ ಬರಲು ಸಾಧ್ಯವಾಗಿಲ್ಲ. ಇದೀಗ ಸ್ವಂತ ಬಲದ ಮೇಲೆ ಜೆಡಿಎಸ್ ಅಧಿಕಾರಕ್ಕೆ ಬರುತ್ತದೆಯೇ ಎಂದು ಪ್ರಶ್ನಿಸಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಯುಪಿಎ ಸರ್ಕಾರದಿಂದ ಲಾಭ ಪಡೆದ ಉದ್ಯಮಿಗಳ ಹೆಸರು ಬಹಿರಂಗಪಡಿಸಿದ ಬಿಜೆಪಿ